ಸುದ್ದಿಒನ್,ಬೆಂಗಳೂರು,ಮೇ.14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮರ್ಥಿಸಿಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪದೇ ಪದೇ ಹಿಜಾಬ್ ವಿಚಾರವನ್ನೇ ಯಾಕೆ ಪ್ರಸ್ತಾಪಿಸುತ್ತೀರಿ? ಬಿಜೆಪಿಯವರು ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಈ ಹಿಂದೆ ಜನಿವಾರ ಕಟ್ ಮಾಡಿದಾಗ ಇವರಿಗೆ ಕಾಣಿಸಲಿಲ್ಲವೇ? ಕೇವಲ ಒಂದು ಸಮುದಾಯದ ವಿಚಾರ ಬಂದಾಗ ಮಾತ್ರ ಇವರಿಗೆ ಧರ್ಮ ನೆನಪಾಗುತ್ತದೆಯೇ? ಎಂದು ಅವರು ಕಿಡಿಕಾರಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನಾಗಲಿ ಅಥವಾ ಬಿಜೆಪಿ ನಾಯಕರನ್ನಾಗಲಿ ಯಾರೂ ಪ್ರಶ್ನಿಸುತ್ತಿಲ್ಲವೇಕೆ?ಆರಂಭದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದ ಬಿಜೆಪಿಯವರು, ಈಗ ಎಲ್ಲೆಡೆ ಅದೇ ಮಾದರಿಯ ಯೋಜನೆಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











