ಸುದ್ದಿಒನ್,ಬೆಂಗಳೂರು,ಮೇ.16: ರಾಜ್ಯದಲ್ಲಿ ಸರಬರಾಜಾಗುವ ಔಷಧಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಲು ಮತ್ತು ಅವುಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ದೇಶದಲ್ಲೇ ಮೊದಲ ಬಾರಿಗೆ ಆನ್ಲೈನ್ ಆಧಾರಿತ ನಿಗಾ ವ್ಯವಸ್ಥೆ (Online Monitoring System) ಜಾರಿಗೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಈ ನೂತನ ತಂತ್ರಜ್ಞಾನವು ಔಷಧ ಕ್ಷೇತ್ರದ ಮೇಲೆ ಸರ್ಕಾರಿ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸಲಿದ್ದು, ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.ಮಾರುಕಟ್ಟೆಯಲ್ಲಿ ಗುಣಮಟ್ಟವಿಲ್ಲದ (Not of Standard Quality) ಔಷಧಗಳು ಪತ್ತೆಯಾದಲ್ಲಿ, ಅವುಗಳ ನಿಗದಿತ ಬ್ಯಾಚ್ಗಳನ್ನು ತಕ್ಷಣವೇ ಗುರುತಿಸಿ ಹಿಂಪಡೆಯಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.ಔಷಧಗಳ ಉತ್ಪಾದನೆಯಿಂದ ಹಿಡಿದು ವಿತರಣೆಯವರೆಗೆ ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳಲು ಈ ಡಿಜಿಟಲ್ ವೇದಿಕೆ ನೆರವಾಗಲಿದೆ.
ಕಳಪೆ ಗುಣಮಟ್ಟದ ಔಷಧಗಳು ರೋಗಿಗಳಿಗೆ ತಲುಪದಂತೆ ತಡೆಯುವುದು ಈ ವ್ಯವಸ್ಥೆಯ ಮುಖ್ಯ ಗುರಿಯಾಗಿದೆ.ದೇಶದಲ್ಲೇ ಇಂತಹದೊಂದು ಆನ್ಲೈನ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದರಿಂದ ಔಷಧಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ಜನಸಾಮಾನ್ಯರಿಗೆ ಸುರಕ್ಷಿತ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪೂರೈಕೆಯಾದ ಔಷಧಗಳ ಮೇಲೆ ನಿಯಂತ್ರಣ ಸಾಧಿಸಲು ದೇಶದಲ್ಲೇ ಮೊದಲ ಬಾರಿಗೆ ಆನ್ಲೈನ್ ಆಧಾರಿತ ನಿಗಾ ವ್ಯವಸ್ಥೆ ಜಾರಿ ಮಾಡಲಾಗಿದೆ. ಗುಣಮಟ್ಟ ಇರದ ಔಷಧಗಳ ನಿಗದಿತ ಬ್ಯಾಚ್ಗಳನ್ನು ಮಾರುಕಟ್ಟೆಯಿಂದ ಕೂಡಲೇ ಹಿಂಪಡೆಯಲು ಇದು ಸಹಕಾರಿಯಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. pic.twitter.com/kpH2xYwEIm
— DIPR Karnataka (@KarnatakaVarthe) May 15, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












