Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಔಷಧ ನಿಯಂತ್ರಣಕ್ಕೆ ದೇಶದಲ್ಲೇ ಮೊದಲ ಆನ್ಲೈನ್ ನಿಗಾ ವ್ಯವಸ್ಥೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

---Advertisement---

ಸುದ್ದಿಒನ್,ಬೆಂಗಳೂರು,ಮೇ.16: ರಾಜ್ಯದಲ್ಲಿ ಸರಬರಾಜಾಗುವ ಔಷಧಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಲು ಮತ್ತು ಅವುಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ದೇಶದಲ್ಲೇ ಮೊದಲ ಬಾರಿಗೆ ಆನ್ಲೈನ್ ಆಧಾರಿತ ನಿಗಾ ವ್ಯವಸ್ಥೆ (Online Monitoring System) ಜಾರಿಗೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಈ ನೂತನ ತಂತ್ರಜ್ಞಾನವು ಔಷಧ ಕ್ಷೇತ್ರದ ಮೇಲೆ ಸರ್ಕಾರಿ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸಲಿದ್ದು, ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.ಮಾರುಕಟ್ಟೆಯಲ್ಲಿ ಗುಣಮಟ್ಟವಿಲ್ಲದ (Not of Standard Quality) ಔಷಧಗಳು ಪತ್ತೆಯಾದಲ್ಲಿ, ಅವುಗಳ ನಿಗದಿತ ಬ್ಯಾಚ್ಗಳನ್ನು ತಕ್ಷಣವೇ ಗುರುತಿಸಿ ಹಿಂಪಡೆಯಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.ಔಷಧಗಳ ಉತ್ಪಾದನೆಯಿಂದ ಹಿಡಿದು ವಿತರಣೆಯವರೆಗೆ ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳಲು ಈ ಡಿಜಿಟಲ್ ವೇದಿಕೆ ನೆರವಾಗಲಿದೆ.

ಕಳಪೆ ಗುಣಮಟ್ಟದ ಔಷಧಗಳು ರೋಗಿಗಳಿಗೆ ತಲುಪದಂತೆ ತಡೆಯುವುದು ಈ ವ್ಯವಸ್ಥೆಯ ಮುಖ್ಯ ಗುರಿಯಾಗಿದೆ.ದೇಶದಲ್ಲೇ ಇಂತಹದೊಂದು ಆನ್ಲೈನ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದರಿಂದ ಔಷಧಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ಜನಸಾಮಾನ್ಯರಿಗೆ ಸುರಕ್ಷಿತ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now