Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವೇಗೌಡರ ಸೇವೆ ದೇಶಕ್ಕೆ ಮಾದರಿ: ಜೆಡಿಎಸ್ ಮುಖಂಡರ ಅಭಿಪ್ರಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 18 : ಮಾಜಿ ಪ್ರಧಾನಿ ಮಣ್ಣಿನ ಮಗ ಹೆಚ್.ಡಿ.ದೇವೆಗೌಡರ 94 ನೇ ಹುಟ್ಟುಹಬ್ಬವನ್ನು ಜೆಡಿಎಸ್. ಕಚೇರಿಯಲ್ಲಿ ಸೋಮವಾರ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ನಿವೃತ್ತ ಮುಖ್ಯ ಇಂಜಿನಿಯರ್ ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ರವೀಂದ್ರಪ್ಪ ಮಾತನಾಡಿ ಹೆಚ್.ಡಿ.ದೇವೆಗೌಡರವರು ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯಾಗಿದ್ದಾಗ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಸಂಕಷ್ಟದಲ್ಲಿದ್ದ ರೈತರಿಗೆ ಆತ್ಮಸ್ಥೈರ್ಯ ತುಂಬಿದರು ಎಂದು ಗುಣಗಾನ ಮಾಡಿದರು.

 

ಇಳಿಯ ವಯಸ್ಸಿನಲ್ಲಿಯೂ ಹೆಚ್.ಡಿ.ದೇವೆಗೌಡರಿಗೆ ರೈತರ ಬಗ್ಗೆ ಕಾಳಜಿಯಿದೆಯಲ್ಲದೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ದೀನ ದಲಿತರು. ಅಲ್ಪಸಂಖ್ಯಾತರ ಹಿತ ಬಯಸುತ್ತಾರೆಂದು ಹೇಳಿದರು.
ಜೆಡಿಎಸ್.ಜಿಲ್ಲಾಧ್ಯಕ್ಷ ಮಂಜುನಾಥ ಕೆ. ಮಾತನಾಡಿ ಹಿಂದಿನಿಂದಲೂ ರೈತರ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೂರು ವರ್ಷಗಳ ಕಾಲ ಬಾಳಲಿ. ಭಗವಂತ ಆರೋಗ್ಯ ಕರಣಿಸಲಿ ಎಂದು ಶುಭ ಹಾರೈಸಿದರು.

 

ಜೆಡಿಎಸ್. ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಡಿ.ಹನುಮಂತರಾಯ, ಜೆಡಿಎಸ್.ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ ಹಿರಿಯೂರು ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಜಲದಪ್ಪ, ಮಹಲಿಂಗಪ್ಪ ಪರಮೇನಹಳ್ಳಿ, ಪಾತಲಿಂಗಪ್ಪ ಲಿಲಾಜನಹಳ್ಳಿ, ಚಂದ್ರಪ್ಪ ಪಿಲಾಜನಹಳ್ಳಿ, ಗೋವಿಂದರಾಜು ಜವನಗೊಂಡನಹಳ್ಳಿ, ರಾಧಮ್ಮ, ಗೀತಮ್ಮ, ರಘು ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...