Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳು ವೈಚಾರಿಕತೆ ಬೆಳೆಸಿಕೊಂಡು ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗಬೇಕು : ಗೌರಮ್ಮ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 19 : ಇಂದಿನ ತೀವ್ರ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ವಿದ್ಯಾರ್ಥಿನಿಯರು ಕೇವಲ ಅಂಕಗಳಿಗೆ ಸೀಮಿತವಾಗದೆ, ನಿರಂತರ ಕಲಿಕಾಸಕ್ತಿ ಹಾಗೂ ಬದುಕನ್ನು ಯಶಸ್ವಿಯಾಗಿ ಕಟ್ಟಿಕೊಳ್ಳುವ ಉನ್ನತ ಕನಸುಗಳನ್ನು ಹೊಂದಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗೌರಮ್ಮ ಜಿ.ಆರ್. ಅವರು ಕರೆ ನೀಡಿದರು.

 

​ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ. (IQAC) ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ನೆನಪಿನಂಗಳ – 2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

​ಪದವಿ ಮುಗಿಸಿ ಹೊರಹೋಗುತ್ತಿರುವ ಬಿ.ಎ. ಮತ್ತು ಬಿ.ಕಾಂ. ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, “ಪದವಿ ಮುಗಿಯಿತು ಎಂದರೆ ಕಲಿಕೆ ಮುಗಿಯಿತು ಎಂದರ್ಥವಲ್ಲ. ನಿಜವಾದ ಸವಾಲುಗಳು ಇನ್ನುಮುಂದೆ ಆರಂಭವಾಗುತ್ತವೆ. ಇಂದಿನ ಜಾಗತಿಕ ಮಾರುಕಟ್ಟೆಯಲ್ಲಿ ತಾವೂ ಗುರುತಿಸಿಕೊಳ್ಳಬೇಕಾದರೆ ಕಾಲೇಜು ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಬೇಕಾದ ತುರ್ತು ಅಗತ್ಯವಿದೆ. ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಾಜದಲ್ಲಿ ಸಬಲೀಕರಣ ಸಾಧ್ಯ,” ಎಂದರು.

 

​ಪ್ರಶ್ನಿಸುವ ಮನೋಭಾವ ಮತ್ತು ವೈಚಾರಿಕತೆ ಅಗತ್ಯ:
​ಮತ್ತೊಬ್ಬ ಮುಖ್ಯ ಅತಿಥಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಎಚ್.ಟಿ, ಸ್ವಾಮಿ ಅವರು ನಂಬಿಕೆ ಮತ್ತು ಮೂಢನಂಬಿಕೆಗಳ ಕುರಿತು ಮಾರ್ಮಿಕವಾಗಿ ಮಾತನಾಡುತ್ತಾ, “ಸಮಾಜದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯುವುದು ಇಂದಿನ ಅಗತ್ಯವಾಗಿದೆ. ವಿದ್ಯಾರ್ಥಿಗಳು ಯಾವುದನ್ನೂ ಕುರುಡಾಗಿ ನಂಬದೆ, ಪ್ರಶ್ನಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ನಮ್ಮ ಸಂಸ್ಕೃತಿ ಮತ್ತು ಬದುಕಿನ ಜ್ಞಾನಕ್ಕೆ ವೈಚಾರಿಕ ಬುದ್ಧಿಶಕ್ತಿಯೇ ಆಧಾರವಾಗಬೇಕು. ಸರಿ-ತಪ್ಪುಗಳನ್ನು ವಿವೇಚಿಸುವ ಶಕ್ತಿಯನ್ನು ಶಿಕ್ಷಣ ನಮಗೆ ನೀಡಬೇಕು,” ಎಂದು ಪ್ರತಿಪಾದಿಸಿದರು.

 

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಣ್ಣ ಅವರು ಮಾತನಾಡಿ, ವಿದ್ಯಾರ್ಥಿನಿಯರು ತಮ್ಮ ಭವಿಷ್ಯದ ಕುರಿತು ದೊಡ್ಡ ಕನಸುಗಳನ್ನು ಕಾಣಬೇಕು ಎಂದು ಪ್ರೇರೇಪಿಸಿದರು. “ಭಾರತದ ಹೆಮ್ಮೆಯ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಹೇಳುವಂತೆ, ಕನಸು ಎಂದರೆ ನಾವು ನಿದ್ದೆ ಮಾಡುವಾಗ ಕಾಣುವುದಲ್ಲ; ಬದಲಿಗೆ ನಮ್ಮನ್ನು ನಿದ್ದೆ ಮಾಡಲು ಬಿಡದಂತೆ ಕಾಡುವ ಶ್ರೇಷ್ಠ ಆಶಯವೇ ನಿಜವಾದ ಕನಸು. ಅಂತಹ ಉನ್ನತ ಧ್ಯೇಯಗಳನ್ನು ಇಟ್ಟುಕೊಂಡು ವಿದ್ಯಾರ್ಥಿನಿಯರು ಮುನ್ನಡೆಯಬೇಕು,” ಎಂದು ಆಶಿಸಿದರು.

 

​ವೇದಿಕೆಯಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಜಯಲಕ್ಷ್ಮಮ್ಮ ಕೆ. ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಮಧುಸೂದನ ಪಿ.ಎನ್. ಸಮಾಜಶಾಸ್ತ್ರ ವಿಭಾಗದ ಡಾ. ವಿಜಯಲಕ್ಷ್ಮಿ ಆರ್ , ಕನ್ನಡ ವಿಭಾಗದ ಡಾ. ಗಾಯಿತ್ರಮ್ಮ, ಐಕ್ಯೂಎಸಿ ಸಂಚಾಲಕರಾದ ಶ್ರೀ ಹಲಸಂದಿ ಸತೀಶ್, ವಾಣಿಜ್ಯಶಾಸ್ತ್ರದ ಕನಕರಾಜು, ಗಿರೀಶ್ ಎಂ., ಗ್ರಂಥಪಾಲಕರಾದ ಕುಮಾರಸ್ವಾಮಿ ಬಿ.ಎಚ್., ದೈಹಿಕಶಿಕ್ಷಣ ನಿರ್ದೇಶಕರಾದ ಶಿವಪ್ರಸಾದ್ ಆರ್, ಪತ್ರಾಂಕಿತ ವ್ಯವಸ್ಥಾಪಕರಾದ ವೆಂಕಟೇಶ್ ಆರ್., ಉಪನ್ಯಾಸಕರಾದ ಡಾ. ನಂದಿನಿ ಟಿ. ಹಾಗೂ ಅಂತಿಮ ವರ್ಷದ ಬಿ.ಎ. ಮತ್ತು ಬಿ.ಕಾಂ ವಿದ್ಯಾರ್ಥಿನಿಯರು ಈ ಭಾವನಾತ್ಮಕ ನೆನಪಿನಂಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...