ಸುದ್ದಿಒನ್,ಮೈಸೂರು,ಮೇ.22: 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ನಗದು ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರೋತ್ಸಾಹಧನದ ವಿವರಗಳು:
ಶೇ. 60 ರಿಂದ ಶೇ. 74.99 ಅಂಕ ಪಡೆದವರಿಗೆ: ₹7,000/-
ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ: ₹15,000/-
ಆದಾಯ ಮಿತಿ: ಈ ಯೋಜನೆಗೆ ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಅರ್ಹತೆಗಳು ಮತ್ತು ನಿಯಮಗಳು:
ರಾಜ್ಯ ಪಠ್ಯಕ್ರಮ (State Syllabus), CBSE ಹಾಗೂ ICSE ಪಠ್ಯಕ್ರಮದಲ್ಲಿ 2026ರ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಶೇ. 60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಎಲ್ಲಾ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar Seeding) ಆಗಿರುವುದನ್ನು ಖಚಿತಪಡಿಸಿಕೊಂಡು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು:
ವೆಬ್ಸೈಟ್ ಲಿಂಕ್: https://swdservices.karnataka.gov.in/PrizeMoneyClientApp/register
(ಅಥವಾ swdservices.karnataka.gov.in → Prize Money Application → Register/Apply ವಿಭಾಗಕ್ಕೆ ಭೇಟಿ ನೀಡಬಹುದು)
ಸಲ್ಲಿಕೆ ಮಾಡಬೇಕಾದ ದಾಖಲೆಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಸಿಗುವ ಆನ್ಲೈನ್ ಸ್ವೀಕೃತಿ (Acknowledgement) ಪ್ರತಿಯೊಂದಿಗೆ ಈ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು:
ಎಸ್ಎಸ್ಎಲ್ಸಿ ಅಂಕಪಟ್ಟಿ (Marks Card)
ಆಧಾರ್ ಕಾರ್ಡ್ ಪ್ರತಿ
ಜಾತಿ ಪ್ರಮಾಣ ಪತ್ರದ ನಕಲು ಪ್ರತಿ
ಈ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಂದ (Headmaster) ದೃಢೀಕರಿಸಿ (Attested), “ಸಹಾಯಕ ನಿರ್ದೇಶಕರು ಗ್ರೇಡ್-1 ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಾ|| ಬಾಬು ಜಗಜೀವನರಾಂ ಭವನ ಕಟ್ಟಡ, ಆದಿಪಂಪ ರಸ್ತೆ, ಪಡುವಾರಹಳ್ಳಿ, ಮೈಸೂರು” ಇಲ್ಲಿಗೆ ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.
ಮೈಸೂರು ಉತ್ತರ ವಲಯದ ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ವ್ಯಾಪ್ತಿಯ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಈ ಮಾಹಿತಿ ತಲುಪಿಸಿ, ಯೋಜನೆಯ ಪ್ರಯೋಜನ ಪಡೆಯುವಂತೆ ಕ್ರಮ ವಹಿಸಲು ಇಲಾಖೆ ಸೂಚಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















