ಸುದ್ದಿಒನ್,ಬೆಂಗಳೂರು,ಮೇ.23: ಮುಂಗಾರು ಹಂಗಾಮಿಗೆ ಬೇಕಾಗುವಷ್ಟು ಬಿತ್ತನೆ ಬೀಜಗಳು ರಾಜ್ಯದಲ್ಲಿ ಸಮೃದ್ಧವಾಗಿ ದಾಸ್ತಾನಿದ್ದು, ರೈತ ಬಾಂಧವರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಧೈರ್ಯ ತುಂಬಿದ್ದಾರೆ.
ಸದ್ಯ ಹಾವೇರಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿರುವುದರಿಂದ, ರೈತರು ಬಿತ್ತನೆ ಕಾರ್ಯಕ್ಕೆ ಚುರುಕಿನಿಂದ ಸಜ್ಜಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಲ್ಲಿ (RSK) ಬೀಜ ಖರೀದಿಗಾಗಿ ರೈತರ ಧಾವಂತ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಅರಿತಿರುವ ಕೃಷಿ ಇಲಾಖೆ, ಜಿಲ್ಲೆಯಾದ್ಯಂತ ಯಾವುದೇ ಕೊರತೆಯಾಗದಂತೆ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಿಸಲು ಬಿಗಿ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದಲ್ಲಿ ಈ ಬಾರಿ ಬಿತ್ತನೆ ಬೀಜಗಳ ಕೊರತೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಸೋಯಾಬಿನ್: ಹಾವೇರಿ ಜಿಲ್ಲೆಯೊಂದಕ್ಕೇ ಸುಮಾರು 8,960 ಕ್ವಿಂಟಲ್ ಸೋಯಾಬಿನ್ ಅಗತ್ಯವಿದ್ದು, ಇಡೀ ರಾಜ್ಯಾದ್ಯಂತ 1.80 ಲಕ್ಷ ಕ್ವಿಂಟಲ್ ಬೇಡಿಕೆ ಇದೆ. ಆದರೆ ನಮ್ಮ ಬಳಿ ಬರೋಬ್ಬರಿ 2.09 ಲಕ್ಷ ಕ್ವಿಂಟಲ್ ಸೋಯಾಬಿನ್ ಬೀಜ ರೆಡಿಯಾಗಿದೆ.
ಹಾವೇರಿಗೆ 1,344 ಕ್ವಿಂಟಲ್ ಶೇಂಗಾ ಬೀಜದ ಅಗತ್ಯವಿದ್ದರೆ, ಇಡೀ ರಾಜ್ಯಕ್ಕೆ 70,000 ಕ್ವಿಂಟಲ್ ಬೇಡಿಕೆ ಇದೆ. ಸದ್ಯ ಇಲಾಖೆಯ ಬಳಿ 74,000 ಕ್ವಿಂಟಲ್ ದಾಸ್ತಾನು ಲಭ್ಯವಿದೆ.ಸಮಗ್ರವಾಗಿ ನೋಡುವುದಾದರೆ, ರಾಜ್ಯದಲ್ಲಿ ಎಲ್ಲಾ ಮಾದರಿಯ ಬೆಳೆಗಳಿಗೆ ಒಟ್ಟು 4.71 ಲಕ್ಷ ಕ್ವಿಂಟಲ್ ಬೀಜದ ಅಗತ್ಯವಿದೆ. ಆದರೆ ಕೃಷಿ ಇಲಾಖೆಯು ಮುಂಜಾಗ್ರತೆಯಾಗಿ 5.46 ಲಕ್ಷ ಕ್ವಿಂಟಲ್ ಬಿತ್ತನೆ ಬೀಜವನ್ನು ಸಂಗ್ರಹಿಸಿಟ್ಟುಕೊಂಡಿದೆ.
ರೈತರಿಗೆ ಅಗತ್ಯವಿರುವ ಎಲ್ಲಾ ರೀತಿಯ ಗುಣಮಟ್ಟದ ಬಿತ್ತನೆ ಬೀಜಗಳು ಗೋದಾಮುಗಳಲ್ಲಿ ಸಿದ್ಧವಾಗಿವೆ. ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದ ದಾಸ್ತಾನು ಇರುವುದರಿಂದ ರೈತರು ಯಾವುದೇ ರೀತಿಯ ಗೊಂದಲ ಅಥವಾ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















