Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.25: ಕಿರುತೆರೆ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ನಿರೂಪಕಿ ಜಾಹ್ನವಿ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಕನ್ನಡಿಗರ ಮನಗೆದ್ದಿದ್ದ ಈ ಕಿರುತೆರೆ ತಾರೆ, ಈಗ ಬಣ್ಣದ ಲೋಕದಿಂದ ರಾಜಕೀಯದತ್ತ ಮುಖ ಮಾಡುವ ಮೂಲಕ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಿದ್ದಾರೆ.

ವರ್ಷಗಳ ಕಾಲ ಈಟಿವಿ ಸೇರಿದಂತೆ ವಿವಿಧ ಪ್ರಮುಖ ವಾಹಿನಿಗಳಲ್ಲಿ ಯಶಸ್ವಿ ಆ್ಯಂಕರ್ ಆಗಿ ಕೆಲಸ ನಿರ್ವಹಿಸಿದ್ದ ಜಾಹ್ನವಿ, ಆನಂತರ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ತಮ್ಮ ಚಾಣಾಕ್ಷತನ ಮತ್ತು ಮಾತುಗಾರಿಕೆಯಿಂದ ಅಪಾರ ಜನಪ್ರಿಯತೆ ಗಳಿಸಿದ್ದ ಅವರು, ಆ ಬಳಿಕ ಹಲವು ಟಿವಿ ಶೋಗಳು ಹಾಗೂ ಸಿನಿಮಾಗಳಲ್ಲೂ ಕಾಣಿಸಿಕೊಂಡು ಸೈ ಎನಿಸಿಕೊಂಡಿದ್ದರು.

ಮನರಂಜನಾ ರಂಗದಲ್ಲಿ ಸಕ್ರಿಯರಾಗಿದ್ದ ಜಾಹ್ನವಿ, ಇದೀಗ ಪ್ರಾದೇಶಿಕ ಪಕ್ಷವಾದ ಜನತಾದಳ (ಜಾತ್ಯತೀತ) ಸೇರ್ಪಡೆಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ. ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಅವರು ಜೆಡಿಎಸ್ನ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. ಕೇಂದ್ರ ಸಚಿವರು ಹಾಗೂ ಜೆಡಿಎಸ್ನ ಹಿರಿಯ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾಹ್ನವಿ ಪಕ್ಷದ ಬಾವುಟ ಹಿಡಿದರು. ಕಾರ್ಯಕ್ರಮದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಜಾಹ್ನವಿ ಅವರಿಗೆ ಜೆಡಿಎಸ್ ಪಕ್ಷದ ಶಾಲು ಹೊದಿಸಿ, ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

Join WhatsApp

Join Now

Join Telegram

Join Now