Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧರ್ಮಗುರು, ಧಾರ್ಮಿಕ ಮುಖಂಡರು ಎಲ್ಲಿ : ಎಂಎಲ್ಸಿ ವಿಶ್ವನಾಥ್ ಪ್ರಶ್ನೆ

Facebook
Twitter
Telegram
WhatsApp

ಮೈಸೂರು: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ಗಲಾಟೆ ತಾರಕಕ್ಕೇರಿದೆ. ಈ ಬಗ್ಗೆ ಎಂಎಲ್ಸಿ ವಿಶ್ವನಾಥ್ ಮಾತನಾಡಿದ್ದು, ಇಂಥ ಸಮಯದಲ್ಲಿ ಧ್ವನಿ ಎತ್ತದೆ ಧರ್ಮಗುರು, ಧಾರ್ಮಿಕ ಮುಖಂಡರು ಎಲ್ಲಿ ಹೋಗಿದ್ದಾರೆಂದು ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದುಗೆ ಮಾತನಾಡಿದ ಅವರು, ಸಮಾಜದಲ್ಲಿ ಅಶಾಂತಿ ಮೂಡಿದ್ದರು ಧ್ವನಿ ಎತ್ತುತ್ತಿಲ್ಲ. ಕೇವಲ ಅನುದಾನಕ್ಕಾಗಿ ನೀವೂ ಸೀಮಿತವಾದರೆ ಹೇಗೆ..? ಈ ವೇಳೆ ಮಠಾಧೀಶರು, ಧರ್ಮಗುರುಗಳು ಧ್ವನಿ ಎತ್ತದೆ ಇರುವುದು ದುರಂತವೇ ಸರಿ. ಈ ವಿಚಾರವಾಗಿ ಎಲ್ಲಾ ಧರ್ಮಗುರುಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಬೇಕಿತ್ತು.

ಹಿಜಾಬ್ ಕೇಸರಿ ಶಾಲಿಗಿಂತ ಶಿಕ್ಷಣ ಮುಖ್ಯ. ಆದ್ರೆ ಈಗ ಹಿಂದೂ ಮತ್ತು ಮುಸ್ಲಿಂ ಮತೀಯವಾದ ವಿಜೃಂಭಿಸುತ್ತಿದೆ. ಬಿಜೆಪಿಯ ಕೆಲವು ವಿಂಗ್ ಗಳು ಕೇಸರಿ ಶಾಲಿನ ವಿಚಾರದಲ್ಲಿ ಗಲಾಟೆ ಮಾಡುತ್ತಿವೆ.

ಕೆಲ ಮುಸ್ಲಿಂ ಮತಾಂಧರರು ಹಿಜಬ್ ಹೆಸರಿನಲ್ಲಿ ಗಲಾಟೆ ಸೃಷ್ಟಿಸಿವೆ. ವೋಟಿನ ಸಲುವಾಗಿ‌ ಮಕ್ಕಳ ಭವಿಷ್ಯದಲ್ಲಿ ಆಟವಾಡಬೇಡಿ‌. ಶಿಕ್ಷಣ ಕ್ಷೇತ್ರದಲ್ಲಿ ವೋಟಿನ ರಾಜಕಾರಣ ಮಾಡಬೇಡಿ. ಮೂರು ಜನ ಕಲ್ಲು ಹೊಡೆದರೆಂದು ಶಾಲೆ ಮುಚ್ಚಿದ್ದು ತಪ್ಪು. ಕಲ್ಲು ತೂರಿದವರನ್ನು ಹಿಡಿದು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!