ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 30 : ಕಟ್ಟಡ ಕಾರ್ಮಿಕರಿಗೆ ವೈಜ್ಞಾನಿಕ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿ.ಐ.ಟಿ.ಯು. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಲಾಕ್ ಲೇಬರ್ ಕೋಡನ್ನು ಕೂಡಲೆ ಸರ್ಕಾರ ರದ್ದುಪಡಿಸಬೇಕು. ಕೇಂದ್ರ ಚುನಾವಣಾ ಆಯೋಗ ಮತದಾರರ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿರುವುದರಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಮದುವೆ ಸಹಾಯ ಧನ ನಿಂತಿದೆ. ಕೂಡಲೆ ಪುನರ್ ಆರಂಭಿಸಬೇಕು. ಕಟ್ಟಡ ಕಾರ್ಮಿಕರು ಮನೆಗಳನ್ನು ನಿರ್ಮಿಸಿಕೊಳ್ಳಲು ಐದು ಲಕ್ಷ ರೂ.ಗಳ ನೆರವು ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಸಿ.ಐ.ಟಿ.ಯು.ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್ಪೀರ್, ಸಂಚಾಲಕ ತಿಪ್ಪೇಸ್ವಾಮಿ, ಡಿ.ಎಂ.ಮಲಿಯಪ್ಪ, ನಿಂಗಮ್ಮ, ಕಟ್ಟಡ ಕಾರ್ಮಿಕರು, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















