Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ನಾಳೆಯಿಂದ ಭಾರಿ ಮಳೆ ಸಾಧ್ಯತೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.2: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ?

ಕರಾವಳಿ ಜಿಲ್ಲೆಗಳು: ಜೂನ್ 3 ರಿಂದ ಜೂನ್ 5 ರವರೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಒಳನಾಡು ಜಿಲ್ಲೆಗಳು: ಜೂನ್ 1 ರಿಂದ ಜೂನ್ 4 ರವರೆಗೆ ಒಳನಾಡಿನ ಒಂದೆರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಇಂದಿನಿಂದ (ಜೂನ್ 2) ಜೂನ್ 4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದ್ದು, ಜೂನ್ 5 ರಂದು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಸಿಕ್ಕಿದೆ.

ಮುಂಜಾಗ್ರತಾ ಕ್ರಮವಾಗಿ ಜೂನ್ 1 ರಿಂದ ಜಾರಿಗೆ ಬರುವಂತೆ, ಮಳೆಗಾಲ ಮುಗಿಯುವ ವರೆಗೆ ಕಡಲ ತೀರಗಳಿಗೆ (ಬೀಚ್ಗಳಿಗೆ) ಭೇಟಿ ನೀಡದಂತೆ ಪ್ರವಾಸಿಗರಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಅಪಾಯಕಾರಿ ಜಾಗಗಳಿಗೆ ತೆರಳದಂತೆ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

Join WhatsApp

Join Now

Join Telegram

Join Now