Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಜ್ಜಯ್ಯನ ಮಠದ ಮಾರ್ಗದರ್ಶನದಲ್ಲೇ ಡಿಕೆಶಿಯ ಸಿಎಂ ಪಯಣ: ಯಾರು ಈ ಅಜ್ಜಯ್ಯ ?

---Advertisement---

ಸುದ್ದಿಒನ್, ಬೆಂಗಳೂರು, ಜೂನ್. 03 : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಪ್ರತಿಜ್ಞಾವಿಧಿ ವೇಳೆ ನಡೆದ ಒಂದು ವಿಶೇಷ ಸಂಗತಿ ಎಲ್ಲರ ಗಮನ ಸೆಳೆದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್, ತಮ್ಮ ಆರಾಧ್ಯ ದೈವವಾದ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಮಾಡಿದರು.

ರಾಜಕೀಯ ಜೀವನದ ಅತ್ಯಂತ ಮಹತ್ವದ ಕ್ಷಣದಲ್ಲಿ ತಮ್ಮ ನಂಬಿಕೆಯ ಕೇಂದ್ರವಾಗಿರುವ ಅಜ್ಜಯ್ಯನನ್ನು ಸ್ಮರಿಸಿದ ಡಿಕೆಶಿ, ಪ್ರಮಾಣವಚನ ಸಮಾರಂಭಕ್ಕೂ ಮುನ್ನ ವೇದಿಕೆಯಲ್ಲಿ ಇರಿಸಲಾಗಿದ್ದ ಅಜ್ಜಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕವೇ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸಿದರು.

ಈ ಪದಗ್ರಹಣ ಸಮಾರಂಭದ ದಿನಾಂಕ ಮತ್ತು ಸಮಯವೂ ಅಜ್ಜಯ್ಯನ ಮಠದ ಸೂಚನೆಯಂತೆ ನಿಗದಿಯಾಗಿತ್ತು ಎನ್ನಲಾಗಿದೆ. ಮುಖ್ಯಮಂತ್ರಿ ಹುದ್ದೆಗೇರಿದ ಪ್ರಕ್ರಿಯೆಯುದ್ದಕ್ಕೂ ಅಜ್ಜಯ್ಯನ ಮಠದ ಪೀಠಾಧ್ಯಕ್ಷರಾದ ಡಾ. ಕರಿವೃಷಭ ಶಿವಯೋಗೀಶ್ವರ ಶ್ರೀಗಳ ಮಾರ್ಗದರ್ಶನವನ್ನು ಡಿಕೆ ಶಿವಕುಮಾರ್ ಅನುಸರಿಸಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ.

ಪ್ರಮಾಣವಚನದ ಮುನ್ನಾದಿನವಾದ ಮಂಗಳವಾರ ರಾತ್ರಿ ಕೂಡ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಬೆಂಗಳೂರಿನ ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಯೇ ತಡರಾತ್ರಿವರೆಗೂ ಕಾಲ ಕಳೆದಿದ್ದ ಅವರು, ಆಶೀರ್ವಾದ ಪಡೆದು ಬಳಿಕ ಮುಂದಿನ ಕಾರ್ಯಕ್ರಮಗಳಿಗೆ ಸಿದ್ಧತೆ ನಡೆಸಿದ್ದರು.

ಎಲ್ಲಿದೆ ಅಜ್ಜಯ್ಯನ ಮಠ?
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠ, ಜನಪ್ರಿಯವಾಗಿ ‘ಅಜ್ಜಯ್ಯನ ಮಠ’ ಎಂದೇ ಪ್ರಸಿದ್ಧಿ ಪಡೆದಿದೆ. ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವ ಹೊಂದಿರುವ ಈ ಮಠ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ.
ಅಜ್ಜಯ್ಯನ ಮಠವು ಹಲವು ರಾಜಕೀಯ ನಾಯಕರು, ಉದ್ಯಮಿಗಳು ಹಾಗೂ ಸಾರ್ವಜನಿಕರ ನಂಬಿಕೆಯ ಕೇಂದ್ರವಾಗಿದ್ದು, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಈ ಮಠದ ಭಕ್ತರಾಗಿದ್ದಾರೆ. ಮುಖ್ಯಮಂತ್ರಿ ಪದಗ್ರಹಣದಂತಹ ಮಹತ್ವದ ಸಂದರ್ಭದಲ್ಲಿ ಅಜ್ಜಯ್ಯನನ್ನು ಸ್ಮರಿಸಿರುವುದು ಡಿಕೆಶಿ ಅವರ ಭಕ್ತಿ ಮತ್ತು ಆಧ್ಯಾತ್ಮಿಕ ನಂಟನ್ನು ಮತ್ತೊಮ್ಮೆ ಅನಾವರಣಗೊಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now