ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 09 : ವಿದ್ಯುತ್ ವಿತರಣಾ ಕಂಪನಿಗಳನ್ನು ಟಾಟಾ ಪವರ್ ಕಂಪನಿಗಳಿಗೆ ನೀಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾನಿರತ ರೈತರು ಕರ್ನಾಟಕ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ವಿದ್ಯುತ್ ಕಂಪನಿಗಳ 19 ಜಿಲ್ಲೆಗಳ ವಿದ್ಯುತ್ ವಿತರಣಾ ಕಂಪನಿಗಳನ್ನು ವ್ಯವಸ್ಥಿತವಾಗಿ ಖಾಸಗಿ ಕಂಪನಿಯವರಿಗೆ ವಹಿಸುತ್ತಿರುವುದನ್ನು ನಾವುಗಳು ವಿರೋಧಿಸುತ್ತೇವೆ. ಸಾವಿರಾರು ಕೋಟಿ ರೂ.ಮೌಲ್ಯದ ವಿತರಣಾ ಕಂಪನಿಗಳು, ಉಪ ಕೇಂದ್ರಗಳು, ಯಂತ್ರೋಪಕರಣ ಬೃಹತ್ ಸೌಕರ್ಯ ಹೊಂದಿರುವ ಸಾರ್ವಜನಿಕ ಆಸ್ತಿ. ಕಂಪನಿಗಳು ಮತ್ತು ನೌಕರರು ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ಆದರೂ ಖಾಸಗಿ ಕಂಪನಿಯವರಿಗೆ ವಹಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಕೆಲವು ರಾಜ್ಯಗಳಲ್ಲಿ ಖಾಸಗಿ ಕಂಪನಿಗಳು ನಿರ್ವಹಣೆ ಮಾಡಲಾರದೆ ಅರ್ಧದಲ್ಲಿ ಬಿಟ್ಟು ಹೋಗಿವೆ. ಖಾಸಗಿ ಸಂಸ್ಥೆಗಳಿಗೆ ನೀಡಿದರೆ ಖಾಸಗಿ ಕಂಪನಿಗಳು ಸ್ಮಾರ್ಟ್ ಮೀಟರ್ಗಳನ್ನು ಅಳವಡಿಸಿ ಮೊಬೈಲ್ ಕಂಪನಿಗಳ ಪೋಸ್ಟ್ ಪೇಯ್ಡೆ ಮಾದರಿಯಲ್ಲಿ ಹಣ ವಸೂಲು ಮಾಡುವುದರಿಂದ ಬಡ ರೈತರು ಕೂಲಿ ಕಾರ್ಮಿಕರು, ವೃದ್ದರು, ರೈತರ ಐ.ಪಿ.ಸೆಟ್ಗಳಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳು ರದ್ದಾಗಲಿದೆ. ಹಾಗಾಗಿ ವಿದ್ಯುತ್ ವಿತರಣಾ ಕಂಪನಿಗಳನ್ನು ಟಾಟಾ ಪವರ್ ಕಂಪನಿಗಳಿಗೆ ನೀಡಬಾರದೆಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಈ.ಎನ್.ಲಕ್ಷ್ಮಿಕಾಂತ್ ಲಿಂಗಾವರಹಟ್ಟಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲೋಲಾಕ್ಷಮ್ಮ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷೆ ಪವಿತ್ರ, ಮಂಜುಳ ಕೊಳಹಾಳ್, ಜಯಲಕ್ಷ್ಮಿ, ಶಕುಂತಲ, ಓಬಳೇಶ್, ಕಾಂತರಾಜ್ ಎಸ್, ನಾಗರಾಜ್, ರಂಗಸ್ವಾಮಿ, ಹೇಮಾರೆಡ್ಡಿ ಕರಿಕೆರೆ, ತಿಪ್ಪೇಸ್ವಾಮಿ, ಗುಂಡ್ಲೂರು ರಮೇಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















