ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಸರ್ದಾರ್ ಪಟೇಲ್ ಮತ್ತು ಜವಾಹರಲಾಲ್ ನೆಹರೂ ಅವರು ಆರ್ಎಸ್ಎಸ್ ಅನ್ನು ನಿಷೇಧಿಸಿದಾಗ, ಇದೇ ಆರ್ ಎಸ್ ಎಸ್ ನವರು ಅವರ ಕೈಕಾಲು ಹಿಡಿದಿದ್ದರು ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಅವರಿಗೆ ಆರ್ಎಸ್ಎಸ್ನ ಇತಿಹಾಸವೇ ಗೊತ್ತಿಲ್ಲ. ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಆರ್ಎಸ್ಎಸ್ ಸಂಚಾಲಕರೇ ಪತ್ರ ಬರೆದು ಕ್ಷಮೆಯಾಚಿಸಿದ್ದರು. ಕಾನೂನಿನ ಪ್ರಕಾರ ಸಂಘಟನೆಯನ್ನು ರಿಜಿಸ್ಟ್ರೇಷನ್ ಮಾಡಿಕೊಳ್ಳಿ ಎಂದರೆ ಅವರಿಗೆ ಯಾಕಷ್ಟು ಭಯ? ನಾವು ಈ ದೇಶದ ಸಂವಿಧಾನ ಮತ್ತು ಕಾನೂನಿಗೆ ಒಳಪಡುವುದಿಲ್ಲ ಎಂದು ಅವರು ಬಹಿರಂಗವಾಗಿ ಹೇಳಲಿ. ನಾನೇ ಅವರ ಕೇಶವಕೃಪ ಕಚೇರಿಗೆ ಹೋಗುತ್ತೇನೆ, ಇಲ್ಲವೇ ಅವರೇ ನನ್ನ ಕಚೇರಿಗೆ ಬಂದು ದಾಖಲೆ ತೋರಿಸಲಿ ಎಂದು ಸವಾಲು ಹಾಕಿದರು.
ದೇಶದ ಕಾನೂನು ಎಲ್ಲರಿಗೂ ಒಂದೇ ಎಂದು ಪ್ರತಿಪಾದಿಸಿದ ಸಚಿವರು, ಲೆಕ್ಕ ಒಪ್ಪಿಸುವ ವಿಚಾರದಲ್ಲಿ ಆರ್ಎಸ್ಎಸ್ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ದೇಶದಲ್ಲಿ ಬೀದಿ ಬದಿಯ ವ್ಯಾಪಾರಿಯೂ ನೋಂದಣಿ ಮಾಡಿಕೊಳ್ಳಬೇಕು. ದೇವಸ್ಥಾನಗಳೂ ನೋಂದಣಿಯಾಗಬೇಕು. ದೇವರ ಹೆಸರಲ್ಲೂ ಲೆಕ್ಕ ಕೊಡಬೇಕು, ಸಾಮಾನ್ಯ ಜನರೂ ಆದಾಯ ತೆರಿಗೆ (IT) ಇಲಾಖೆಗೆ ಲೆಕ್ಕ ಕೊಡಬೇಕು. ಆದರೆ ಆರ್ಎಸ್ಎಸ್ನವರು ಮಾತ್ರ ಯಾವುದೇ ಲೆಕ್ಕ ಕೊಡುವ ಹಾಗಿಲ್ಲವೇ? ಅವರ ದೇಣಿಗೆಗೆ ಪಾರದರ್ಶಕತೆ ಬೇಡವೇ? ಎಂದು ಪ್ರಶ್ನಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















