Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗತ್ಯ ವಸ್ತುಗಳ ಬಳಿಕ ಅಕ್ಕಿಗೂ ಬೆಲೆ ಬಿಸಿ: ಮಧ್ಯಮ ವರ್ಗ ಕಂಗಾಲು

---Advertisement---

ಸುದ್ದಿಒನ್, ಜೂ.13: ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೇ ಇದೀಗ ಅಕ್ಕಿ ದರವೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಮುಖ ಅಕ್ಕಿ ತಳಿಗಳ ಬೆಲೆ ಕೆಜಿಗೆ ₹5 ರಿಂದ ₹13ರವರೆಗೆ ಹೆಚ್ಚಳ ಕಂಡಿದ್ದು, ಕುಟುಂಬಗಳ ಮಾಸಿಕ ಬಜೆಟ್ ಮೇಲೆ ಪರಿಣಾಮ ಬೀರಿದೆ.ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕಡಿಮೆಯಾಗಿರುವುದು ಹಾಗೂ ಬೇಡಿಕೆ ಹೆಚ್ಚಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಇರುವ ಸಂಗ್ರಹವು ನವೆಂಬರ್‌ವರೆಗೆ ಮಾತ್ರ ಸಾಕಾಗುವ ಸಾಧ್ಯತೆ ಇದ್ದು, ಹೊಸ ಬೆಳೆ ಮಾರುಕಟ್ಟೆಗೆ ಬರುವವರೆಗೂ ಬೆಲೆ ಇಳಿಕೆಯಾಗುವ ಲಕ್ಷಣಗಳು ಕಾಣುತ್ತಿಲ್ಲ.

ಸೋನಾಮಸೂರಿ ಅಕ್ಕಿಯ ದರ ಕೆಜಿಗೆ ₹54ರಿಂದ ₹64ಕ್ಕೆ ಏರಿಕೆಯಾಗಿದೆ. ಕಾವೇರಿ ಸ್ಟೀಮ್ ಅಕ್ಕಿಯ ದರ ₹42ರಿಂದ ₹55ಕ್ಕೆ ಹೆಚ್ಚಳ ಕಂಡಿದೆ. ಇದೇ ರೀತಿ ಸ್ಟೀಮ್ ಅಕ್ಕಿಯ ವಿವಿಧ ತಳಿಗಳ ಬೆಲೆ ₹48ರಿಂದ ₹60ಕ್ಕೆ ಹಾಗೂ ₹53ರಿಂದ ₹65ಕ್ಕೆ ಏರಿಕೆಯಾಗಿದೆ. ಕೊಲ್ಲಂ ಸ್ಟೀಮ್ ಅಕ್ಕಿಯ ದರ ಕೂಡ ₹58ರಿಂದ ₹68ಕ್ಕೆ ಹೆಚ್ಚಳವಾಗಿದ್ದು, ಪ್ರಮುಖ ಅಕ್ಕಿ ತಳಿಗಳಲ್ಲಿ ಪ್ರತಿ ಕೆಜಿಗೆ ₹10ರಿಂದ ₹13ರವರೆಗೆ ಏರಿಕೆ ದಾಖಲಾಗಿದೆ.ದರ ಏರಿಕೆಯ ಪರಿಣಾಮ ಮನೆ ಬಳಕೆದಾರರಷ್ಟೇ ಅಲ್ಲದೆ ಹೋಟೆಲ್‌, ಕ್ಯಾಂಟೀನ್‌, ರೆಸ್ಟೋರೆಂಟ್‌ ಹಾಗೂ ಆಹಾರ ಉದ್ಯಮಗಳ ಮೇಲೂ ಬಿದ್ದಿದೆ. ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಭೀತಿಯಿಂದ ಗ್ರಾಹಕರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಗೆ ಮುಂದಾಗುತ್ತಿರುವುದು ಬೇಡಿಕೆಯನ್ನು ಇನ್ನಷ್ಟು ಹೆಚ್ಚಿಸಿದೆ.

ವ್ಯಾಪಾರಿಗಳ ಮಾಹಿತಿ ಪ್ರಕಾರ, 26 ಕೆಜಿ ಅಕ್ಕಿ ಚೀಲದ ದರದಲ್ಲಿ ₹150ರವರೆಗೆ ಹೆಚ್ಚಳ ದಾಖಲಾಗಿದ್ದು, ಪೂರೈಕೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.ಅಕ್ಕಿ ದರದ ಈ ದಿಢೀರ್ ಏರಿಕೆಯಿಂದ ಮಧ್ಯಮ ವರ್ಗ ಹಾಗೂ ಕಡಿಮೆ ಆದಾಯದ ಕುಟುಂಬಗಳ ಮಾಸಿಕ ಖರ್ಚಿನ ಲೆಕ್ಕಾಚಾರ ಅಸ್ತವ್ಯಸ್ತವಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ತರಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now