Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಧಿಕಾ ಅವರಿಗೆ ಕುಮಾರಸ್ವಾಮಿ ಕೊಟ್ಟ ನೂರಾರು ಕೋಟಿ ಹಣದ ಬಗ್ಗೆ ಮಾಜಿ ಶಾಸಕ ಪ್ರಶ್ನೆ..!

Facebook
Twitter
Telegram
WhatsApp

ರಾಮನಗರ: ಕುಮಾರಸ್ವಾಮಿ ಅವರು ಹೇಳಿದಂತೆ ಕೇಳುವವರನ್ನು ಮಾತ್ರ ಬೆಳೆಸುತ್ತಾರೆ. ಕಾಂಗ್ರೆಸ್ ಬೆಂಬಲದಿಂದ ಅವರು ಎರಡನೇ ಬಾರಿ ಸಿಎಂ ಆದವರು ಎಂದು ಮಾಜಿ ಶಾಸಕ ಕೆ ರಾಜು, ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ್ದಾರೆ.

ನಾನು ರಾಜಕೀಯಕ್ಕೆ ಬಂದಾಗ ಕುಮಾರಸ್ವಾಮಿ ಎಲ್ಲಿದ್ದರೋ ಗೊತ್ತಿಲ್ಲ. ದೇವೇಗೌಡರ ಮಗನೆಂಬ ಕಾರಣಕ್ಕೆ ಜನರು ಅವರನ್ನ ಗುರುತಿಸಿದರು. ರಾಮನಗರಕ್ಕೆ ಅವರನ್ನ ನಾವೇ ಕರೆತಂದದ್ದು. ಆದ್ರೆ ಅವರು ಒಬ್ಬರ ಮೇಲೊಬ್ಬರನ್ನ ಎತ್ತಿಕಟ್ಟಿ ಮೇಲೆ ಬಂದರು.

ಕುಮಾರಸ್ವಾಮಿ ಹಣ ಮಾಡುವ ದಂಧೆಗೆ ಇಳಿದರು. ಮಂಡ್ಯದಿಂದ ಮಗನನ್ನ ಗೆಲ್ಲಿಸಿಕೊಳ್ಳೋದಕ್ಕೆ ಕುಮಾರಸ್ವಾಮಿ ಅವರಿಗೆ ಆಗಲಿಲ್ಲ. ಒಂದಲ್ಲ ಎರಡಲ್ಲ ನೂರಾರು ಕೋಟಿ ಹಣ ಸುರಿದರು ಮಗನನ್ನ ಗೆಲ್ಲಿಸಿಕೊಳ್ಳಲು ಆಗಲೇ ಇಲ್ಲ. ಕುಮಾರಸ್ವಾಮಿ ಅವರ ಅಕ್ರಮ ನೋಡಿ ಜನರು ಅವರನ್ನ ಸೋಲಿಸಿದ್ರು. ದೇವೇಗೌಡರ ಸೋಲಿಗೂ ಕುಮಾರಸ್ವಾಮಿ ಅವರೇ ಕಾರಣ.

ಸುಳ್ಳಿನ ಮಾಲೆ ಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದವರು ರಾಧಿಕಾ ಅವರನ್ನ ಮತ್ತೊಂದು ಮದುವೆಯಾದರು. ಆ ಬಳಿಕ ಕುಮಾರಸ್ವಾಮಿಯಿಂದ ರಾಧಿಕಾ ದೂರಾಗಲೂ ನೂರಾರು ಕೋಟಿ ಹಣ ಸುರಿದರು. ಅದು ಯಾವ ಪುಣ್ಯದಿಂದ ಬಂದ ಹಣ ಹಾಗಾದ್ರೆ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!