Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಜನರಿಗೆ ಸಿಹಿ ಸುದ್ದಿ: ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ವಾಸಸ್ಥಳ ದೃಢೀಕರಣ ಪತ್ರ!

---Advertisement---

ಬೆಂಗಳೂರು.ಜೂನ್.21: ಗ್ರಾಮೀಣ ಪ್ರದೇಶದ ಜನರಿಗೆ ರಾಜ್ಯ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ವಿವಿಧ ಉದ್ದೇಶಗಳಿಗಾಗಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿ ಬೇಕಾಗುವ ‘ವಾಸಸ್ಥಳ ದೃಢೀಕರಣ ಪತ್ರ’ವನ್ನು (Residence Certificate) ಇನ್ಮುಂದೆ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ಪಡೆಯಲು ಅವಕಾಶ ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇದುವರೆಗೆ ಗ್ರಾಮೀಣ ಭಾಗದ ನಾಗರಿಕರು ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಹೋಬಳಿ ಕೇಂದ್ರಗಳಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿತ್ತು. ಇದರಿಂದ ತುರ್ತು ಸಂದರ್ಭಗಳಲ್ಲಿ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿತ್ತು ಮತ್ತು ಸಾರ್ವಜನಿಕರು ಅಲೆದಾಡುವಂತಾಗಿತ್ತು. ಈ ಸಮಸ್ಯೆಯನ್ನು ನಿವಾರಿಸಲು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಾಸಸ್ಥಳ ದೃಢೀಕರಣ ಪತ್ರ ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿ ಆದೇಶಿಸಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಸ್ಥಳ ಪ್ರಮಾಣ ಪತ್ರ ನೀಡಲು ಸಾರ್ವಜನಿಕರಿಂದ ಯಾವುದೇ ರೀತಿಯ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.ಈಗಾಗಲೇ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕವೇ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಅಟಲ್ ಜೀ ಜನಸ್ನೇಹಿ ಕೇಂದ್ರದ ತಂತ್ರಾಂಶವನ್ನು ಬಳಸಿಕೊಂಡು ಈ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ತಮ್ಮ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಒಂದು ಬಾರಿಗೆ ಅಭಿಯಾನದ ಮಾದರಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಈ ಪತ್ರವನ್ನು ನೀಡಲು ಸೂಚಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರಿಗೆ ಯಾವುದೇ ವಿಳಂಬವಿಲ್ಲದೆ, ಸ್ಥಳೀಯವಾಗಿಯೇ ಅತ್ಯಂತ ಸುಲಭವಾಗಿ ಮತ್ತು ಉಚಿತವಾಗಿ ವಾಸಸ್ಥಳ ದೃಢೀಕರಣ ಪತ್ರ ಸಿಗುವಂತಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಈ ಪ್ರಮಾಣ ಪತ್ರ ನೀಡಲು ಅಗತ್ಯವಿರುವ ದಾಖಲೆಗಳು ಮತ್ತು ಕಾರ್ಯವಿಧಾನದ ಕುರಿತು ಸರ್ಕಾರವು ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now