Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

WATCH : ಇಟಲಿ ರೆಸ್ಟೋರೆಂಟ್ ನಲ್ಲಿ ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿದ ಬಾಂಗ್ಲಾದೇಶಿ ವೇಟರ್!

---Advertisement---

ದೆಹಲಿ.ಜೂನ್.24: ಭಾರತ ಮತ್ತು ಭಾರತೀಯ ಗ್ರಾಹಕರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ ಇಟಲಿಯ ರೆಸ್ಟೋರೆಂಟ್ ನ ವೇಟರ್ ಒಬ್ಬನನ್ನು ಭಾರತೀಯ ಮಹಿಳಾ ಪ್ರವಾಸಿಗರ ತಂಡವೊಂದು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಮಹಿಳೆಯರು ಧೈರ್ಯದಿಂದ ವೇಟರ್ ನನ್ನು ಬೆವರಿಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಭಾರತೀಯರ ಪ್ರಶಂಸೆಗೆ ಪಾತ್ರವಾಗಿದೆ.

ಇನ್ ಸ್ಟಾಗ್ರಾಮ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇಟಲಿಯ ರೆಸ್ಟೋರೆಂಟ್ವೊಂದಕ್ಕೆ ಭೇಟಿ ನೀಡಿದ್ದ ಭಾರತೀಯ ಮಹಿಳೆಯರ ಗುಂಪಿನೊಂದಿಗೆ ಅಲ್ಲಿನ ವೇಟರ್ ಉದ್ಧಟತನದಿಂದ ವರ್ತಿಸಿದ್ದಾನೆ. ಮಾತಿನ ಚಕಮಕಿ ನಡೆಯುವಾಗ ಆತ ಭಾರತದ ಬಗ್ಗೆ ಅತ್ಯಂತ ಆಕ್ಷೇಪಾರ್ಹ ಹಾಗೂ ನಿಂದನಾತ್ಮಕ ಪದಗಳನ್ನು ಬಳಸಿದ್ದಲ್ಲದೆ, “ನೀವು ಫ… ಇಂಡಿಯಾದಿಂದ ಬಂದವರು” (You Are From F***ing India) ಎಂದು ಜನಾಂಗೀಯ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ.

ವೇಟರ್ ನ ಈ ನಿಂದನೆಯನ್ನು ಸಹಿಸದ ಮಹಿಳೆಯರು, ಅಲ್ಲಿಂದ ಸುಮ್ಮನೆ ಹೊರಟುಹೋಗದೆ ಆತನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಬಗ್ಗೆ ಈ ರೀತಿ ಅವಮಾನಕಾರಿಯಾಗಿ ಮಾತನಾಡುವುದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಘಟನೆಯ ಸಂಪೂರ್ಣ ಹಿನ್ನೆಲೆ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ, ಮಹಿಳೆಯರು ತಮ್ಮ ದೇಶದ ಗೌರವಕ್ಕಾಗಿ ಪಟ್ಟು ಹಿಡಿದು ಆತನಿಂದ ಕ್ಷಮೆಯಾಚನೆಗೆ ಒತ್ತಾಯಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ವಿವಾದ ತಾರಕಕ್ಕೇರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ ವೇಟರ್ ತಣ್ಣಗಾಗಿದ್ದಾನೆ. ಪೊಲೀಸರ ಸಮ್ಮುಖದಲ್ಲೂ ಮಹಿಳೆಯರು ಆತ ಭಾರತ ದೇಶಕ್ಕೆ ಅಪಮಾನ ಮಾಡಿದ್ದಕ್ಕಾಗಿ ನಿರ್ದಿಷ್ಟವಾಗಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಕೊನೆಗೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ವೇಟರ್, “ನಾನು ಭಾರತವನ್ನು ನಿಂದಿಸಿದ್ದಕ್ಕಾಗಿ ಕ್ಷಮೆ ಯಾಚಿಸುತ್ತೇನೆ” (I’m sorry for abusing India) ಎಂದು ಒಪ್ಪಿಕೊಂಡು ಕ್ಷಮೆ ಕೇಳಿದ್ದಾನೆ. ಇದರೊಂದಿಗೆ ವಿವಾದ ಸದ್ಯಕ್ಕೆ ತಿಳಿಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now