ವಿಕ್ಟೋರಿಯಾ.ಜೂನ್.28: ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕ್ಷೇತ್ರದಲ್ಲಿನ ಅಪ್ರತಿಮ ನಾಯಕತ್ವಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್’ (Guardian of the Blue Horizon) ಪ್ರಶಸ್ತಿಯನ್ನು ಭಾನುವಾರ ಪ್ರದಾನ ಮಾಡಲಾಗಿದೆ.
ಪ್ರಧಾನಿ ಮೋದಿಯವರ ಸುಸ್ಥಿರ ಬೆಳವಣಿಗೆಯ ದೀರ್ಘಕಾಲೀನ ಪ್ರಯತ್ನಗಳು ಮತ್ತು ಅವರ ಪರಿಸರ ಸ್ನೇಹಿ ಹಸಿರು ದೃಷ್ಟಿಕೋನವನ್ನು ಗುರುತಿಸಿ ಈ ಪ್ರತಿಷ್ಠಿತ ಗೌರವವನ್ನು ನೀಡಲಾಗಿದೆ. ಮೂರು ದಿನಗಳ ಸೀಶೆಲ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಅಲ್ಲಿನ ದೇಶದ ಅಧ್ಯಕ್ಷ ಹರ್ಮಿನಿಯವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
Mon annan gratitid anver lepep ek gouvernman Sesel osi byen ki Prezidan Herminie pour donn mwan tit ‘Gardyen Lorizon Ble.’
Mon enbleman aksepte sa tit avek loner e dedye li a tou lezot pei ki pe lager kont bann defi sanzman klima e ki konsider proteksyon lanvironnman zot… pic.twitter.com/aHZVPOe9cF
— Narendra Modi (@narendramodi) June 28, 2026
ಹವಾಮಾನ ವೈಪರೀತ್ಯ ನಿಯಂತ್ರಣ, ಸುಸ್ಥಿರ ಅಭಿವೃದ್ಧಿ ಮತ್ತು ಹಸಿರು ಬೆಳವಣಿಗೆಗಾಗಿ ಪ್ರಧಾನಿ ಮೋದಿ ಅವರು ಕೈಗೊಂಡ ಕಾರ್ಯಗಳಿಗೆ ಜಾಗತಿಕ ಮಟ್ಟದಲ್ಲಿ ಸಿಗುತ್ತಿರುವ ಸರಣಿ ಗೌರವಗಳಲ್ಲಿ ಇದು ಇತ್ತೀಚಿನದ್ದಾಗಿದೆ.
ಮೇ 2026: ಆಹಾರ ಭದ್ರತೆಯನ್ನು ಬಲಪಡಿಸುವುದು, ಕೃಷಿ ರೂಪಾಂತರ ಮತ್ತು ಸುಸ್ಥಿರ ಬೇಸಾಯವನ್ನು ಉತ್ತೇಜಿಸಿದ್ದಕ್ಕಾಗಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಅವರಿಗೆ ‘ಅಗ್ರಿಕೋಲಾ ಪದಕ’ (Agricola Medal) ನೀಡಿ ಗೌರವಿಸಿತ್ತು.
2018: ಸುಸ್ಥಿರ ಆರ್ಥಿಕ ಬೆಳವಣಿಗೆ, ಜಾಗತಿಕ ಸಹಕಾರ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸಿದ್ದಕ್ಕಾಗಿ ‘ಸಿಯೋಲ್ ಶಾಂತಿ ಪ್ರಶಸ್ತಿ’ ಲಭಿಸಿತ್ತು.

2018: ವಿಶ್ವಸಂಸ್ಥೆಯು ತನ್ನ ಅತ್ಯುನ್ನತ ಪರಿಸರ ಪ್ರಶಸ್ತಿಯಾದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಗೌರವವನ್ನು ನೀಡಿತ್ತು.
ಪ್ರಶಸ್ತಿ ಪ್ರದಾನದ ಬಳಿಕ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾತನಾಡಿದ ಸೀಶೆಲ್ಸ್ ಅಧ್ಯಕ್ಷ ಹರ್ಮಿನಿಯವರು, ಭಾರತ ಮತ್ತು ಸೀಶೆಲ್ಸ್ ದೇಶಗಳು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸ್ಥಿರತೆ, ಭದ್ರತೆ ಮತ್ತು ಸಮೃದ್ಧಿಯ ಸಾಮೂಹಿಕ ದೃಷ್ಟಿಕೋನವನ್ನು ಹೊಂದಿವೆ. ಉಭಯ ದೇಶಗಳ ರಾಜತಾಂತ್ರಿಕ ಸಂಬಂಧದ 50ನೇ ವರ್ಷದ ಸಂದರ್ಭದಲ್ಲಿ, ನಮ್ಮ ಸ್ನೇಹ ಮತ್ತು ಪರಸ್ಪರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ನಾವು ಬದ್ಧರಾಗಿದ್ದೇವೆ.ಅಲ್ಲದೆ, ಈ ವರ್ಷದ ಆರಂಭದಲ್ಲಿ ಸೀಶೆಲ್ಸ್ ಅಳವಡಿಸಿಕೊಂಡ ‘ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಭದ್ರತೆಗಾಗಿ ಜಂಟಿ ದೃಷ್ಟಿಕೋನ’ದ ಅನುಷ್ಠಾನದ ಕುರಿತು ಉಭಯ ನಾಯಕರು ಪ್ರಮುಖವಾಗಿ ಚರ್ಚಿಸಿದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಸೀಶೆಲ್ಸ್ ಅಧ್ಯಕ್ಷರ ನಡುವೆ ನಿಯೋಗ ಮಟ್ಟದ ಮಾತುಕತೆ ನಡೆಯಿತು. ಭಾರತದ ನಿಯೋಗದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಉಪಸ್ಥಿತರಿದ್ದರು.
ಸೀಶೆಲ್ಸ್ ಪರವಾಗಿ ಉಪಾಧ್ಯಕ್ಷ ಸೆಬಾಸ್ಟಿಯನ್ ಪಿಲ್ಲೆ, ಮೀನುಗಾರಿಕೆ ಮತ್ತು ಬ್ಲೂ ಎಕಾನಮಿ ಸಚಿವ ವಾಲೇಸ್ ಕಾಸ್ಗ್ರೋವ್ ಹಾಗೂ ವಿದೇಶಾಂಗ ಸಚಿವ ಬ್ಯಾರಿ ಫಾರೆ ಪಾಲ್ಗೊಂಡಿದ್ದರು. ದಿನದ ಆರಂಭದಲ್ಲಿ ಪ್ರಧಾನಿ ಮೋದಿಯವರಿಗೆ ಸೀಶೆಲ್ಸ್ನ ‘ಸ್ಟೇಟ್ ಹೌಸ್’ನಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ತಮ್ಮ ಈ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರು ಸೀಶೆಲ್ಸ್ನ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಅಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













