ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂ. 28 : ಜಿಲ್ಲೆಯ ಹೊಳಲ್ಕೆರೆ ತಾಲೂಕು ಉಪ್ಪರಿಗೆನಹಳ್ಳಿಯಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಭಾನುವಾರ ಗ್ರಾಮದಲ್ಲಿ ಕತ್ತೆಗಳ ಮೆರವಣಿಗೆ ಮಾಡಲಾಯಿತು.
ಈಗ ಮಳೆ ಬರಬೇಕಾಗಿತ್ತು ಆದರೆ ವರುಣ ನಮ್ಮ ಮೇಲೆ ಕೃಪೆಯನ್ನು ತೋರಲಿಲ್ಲ ಈ ಹಿನ್ನಲೆಯಲ್ಲಿ ನಮ್ಮ ಅಜ್ಜಂದಿರ ಕಾಲದಲ್ಲಿ ಮಳೆ ಬಾರದಿದ್ದಾಗ ಕಪ್ಪೆ, ಹಾಗೂ ಕತ್ತೆಗಳ ಮದುವೆಯನ್ನು ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಈ ಹಿನ್ನಲೆಯಲ್ಲಿ ಇಂದು ಹೊಳಲ್ಕೆರೆ ತಾಲೂಕು ಉಪ್ಪರಿಗೆನಹಳ್ಳಿಯಲ್ಲಿ ಕತ್ತೇಗಳ ಮದುವೆಯನ್ನು ಮಾಡುವುದರ ಮೂಲಕ ವರುಣನ ಕೃಪೆಯನ್ನು ಕೊರಲಾಯಿತು.
ಈ ಸಂದರ್ಭದಲ್ಲಿ ಗುಡಿಗೌಡ್ರು ತಿಪ್ಪೇಸ್ವಾಮಿ ಮಹೇಶ್ ಮನು ಪ್ರದೀಪ್ ರಂಗಸ್ವಾಮಿ ಬಸವರಾಜ್ ಕೆಂಚಪ್ಪ ಶಿವಮೂರ್ತಿ ಸಂತೋಷ್ ರಂಗನಾಥ್ ರವಿಕುಮಾರ್ ಭಾಗವಹಿಸಿದ್ದರು, ಗ್ರಾಮಸ್ಥರ ನೇತೃತ್ವದಲ್ಲಿ ಗ್ರಾಮದಲ್ಲಿ ಕತ್ತೇಗಳ ಮದುವೆಯನ್ನು ಮಾಡಿ ಮೆರವಣಿಗೆ ಮಾಡಲಾಯಿತು
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












