ಚಿತ್ರದುರ್ಗ. ಜೂನ್. 29: 2026-27ನೇ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಿಲ್ಲೆಯ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಜಿಲ್ಲೆಯ ಎಲ್ಲಾ ತಾಳ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.
ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗುವ ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ಮಳೆಯ ಹಂಚಿಕೆ, ತಾಪಮಾನ, ಗಾಳಿಯ ವೇಗ ಮತ್ತು ಆದ್ರ್ರತೆ ಇತ್ಯಾದಿ ಮಾಹಿತಿಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. ಜಿಲ್ಲೆಗೆ ‘ರಿಲಯನ್ಸ್ ಇನ್ಶೂರೆನ್ಸ್ ಕಂಪನಿ’ಯನ್ನು ನಿಗದಿಪಡಿಸಲಾಗಿದೆ.
ಪ್ರತಿ ಹೆಕ್ಟೇರ್ಗೆ ಅಡಿಕೆ ಬೆಳೆಗೆ ₹1,28,000 ವಿಮಾ ಮೊತ್ತವಿದ್ದು, ರೈತರು ₹6,400 ಪ್ರೀಮಿಯಂ ಪಾವತಿಸಬೇಕಾಗುತ್ತದೆ. ದಾಳಿಂಬೆ ಬೆಳೆಗೆ ₹1,27,000 ವಿಮಾ ಮೊತ್ತಕ್ಕೆ ₹6,350 ಹಾಗೂ ಮಾವು ಬೆಳೆಗೆ ₹80,000 ವಿಮಾ ಮೊತ್ತಕ್ಕೆ ₹4,000 ಪ್ರೀಮಿಯಂ ಪಾವತಿಸಬೇಕಾಗತ್ತದೆ.
ವಿಮಾ ವ್ಯಾಪ್ತಿಗೆ ಒಳಪಡುವ ಬೆಳೆಗಳು ಫಸಲು ನೀಡುವ ಹಂತದಲ್ಲಿರಬೇಕು ಹಾಗೂ ಸಾಲ ಪಡೆದಿರುವ ಮತ್ತು ಸಾಲ ಪಡೆಯದ ಇಬ್ಬರೂ ರೈತರು ಈ ವಿಮೆಗೆ ಒಳಪಡಬಹುದು. ಆದರೆ, ನೋಂದಣಿ ಮಾಡಲು ಉದ್ದೇಶಿಸಿರುವ ಬೆಳೆಯು ಹಿಂದಿನ ವರ್ಷಗಳ ಅಥವಾ ಮುಂಗಾರಿನ ಬೆಳೆ ಸಮೀಕ್ಷೆಯಲ್ಲಿ ಕಂಡುಬರದಿದ್ದರೆ ಅಂತಹ ಬೆಳೆಗಳ ನೋಂದಣಿಗೆ ಅನುಮತಿ ಇರುವುದಿಲ್ಲ.
ಅರ್ಹ ರೈತರು ಪ್ರಸ್ತುತ ಸಾಲಿನ ಪಹಣಿ ಪತ್ರಿಕೆ, ಎಫ್.ಐ.ಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕ (ಆಧಾರ್ ಜೋಡಣೆಯಾಗಿ ಎನ್.ಪಿ.ಸಿ.ಐ ಸಕ್ರಿಯವಾಗಿರಬೇಕು) ದಾಖಲೆಗಳೊಂದಿಗೆ ಹತ್ತಿರದ ಗ್ರಾಮ-1 ಕೇಂದ್ರ, ಬ್ಯಾಂಕುಗಳು ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










