Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

“ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ” : ಗಾಯಕಿ ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

---Advertisement---

ದೆಹಲಿ,ಜುಲೈ.12: ಭಾರತೀಯ ಚಿತ್ರರಂಗದ ದಂತಕಥೆ, ಬಹುಭಾಷಾ ಗಾಯಕಿ ಎಸ್. ಜಾನಕಿ (ಶಿಷ್ಟ್ಲಾ ಜಾನಕಿ) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಎಸ್. ಜಾನಕಿ ಅವರ ನಿಧನವು ಭಾರತೀಯ ಸಂಗೀತ ಲೋಕಕ್ಕೆ ಎದುರಾದ ತುಂಬಲಾರದ ನಷ್ಟವಾಗಿದೆ. ದಶಕಗಳ ಕಾಲ ತಮ್ಮ ಸುಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಅವರು, ಮುಂಬರುವ ತಲೆಮಾರುಗಳಿಗೂ ಪ್ರೇರಣೆಯಾಗಿದ್ದಾರೆ. ಅವರ ಅಗಲಿಕೆಯಿಂದ ದುಃಖಿತರಾಗಿರುವ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಭಗವಂತನು ನೋವನ್ನು ಭರಿಸುವ ಶಕ್ತಿ ನೀಡಲಿ,” ಎಂದು ಕಂಬನಿ ಮಿಡಿದಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳು ಹಾಗೂ ಹಿಂದಿ ಒಳಗೊಂಡಂತೆ ಸಾವಿರಾರು ಗೀತೆಗಳನ್ನು ಹಾಡಿ, ‘ಗಾನಕೋಗಿಲೆ’ ಎಂದೇ ಪ್ರಸಿದ್ಧರಾಗಿದ್ದ ಎಸ್. ಜಾನಕಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಹಾಗೂ ಕೋಟ್ಯಂತರ ಸಂಗೀತ ಪ್ರೇಮಿಗಳು ಕಂಬನಿ ಮಿಡಿಯುತ್ತಿದ್ದಾರೆ.

Join WhatsApp

Join Now

Join Telegram

Join Now