Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹನುಮಂತಪ್ಪ ಅವರ ನಿಧನಕ್ಕೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಂತಾಪ

---Advertisement---

ಚಿತ್ರದುರ್ಗ, ಜುಲೈ. 12 : ಅಗಲಿದ ಮಾಜಿ ಸಂಸದ ಹಾಗೂ ನೀರಾವರಿ ಹೋರಾಟ ಸಮಿತಿ ಮೊದಲ ಅಧ್ಯಕ್ಷ ಹೆಚ್.ಹನುಮಂತಪ್ಪ ಅವರ ನಿಧನಕ್ಕೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತೀರ್ವ ಸಂತಾಪ ವ್ಯಕ್ತಪಡಿಸಿದೆ.  ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಕಟ್ಟಾ ಅನುಯಾಯಿಯಾಗಿದ್ದ ಹನುಮಮಂತಪ್ಪ ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ಜಿಲ್ಲೆಯಲ್ಲಿ ಆರಂಭಗೊಂಡ ಹೋರಾಟದ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಯೋಜನೆ ಜಾರಿಗಾಗಿ ರಾಜ್ಯಮಟ್ಟದ ಪ್ರಯತ್ನ ನಡೆಸಿದ್ದರು.

ಅವರ ಅಗಲಿಕೆ ನೋವು ತಂದಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ,  ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಉಪಾಧ್ಯಕ್ಷರುಗಳಾದ ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಸುರೇಶ್ ಬಾಬು, ಸಿಪಿಐ ಜಿಲ್ಲಾ ಕಾರ್ಯದರ್ಶಿ  ಜಿ.ಸಿ.ಸುರೇಶ್ ಬಾಬು ಸಂತಾಪ ಸೂಚಕ  ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಗಲಿದ ಹನುಮಂತಪ್ಪ ಅವರ ಪಾರ್ಥಿವ ಶರೀರವ ಸಾರ್ವಜನಿಕ ದರ್ಶನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದಲ್ಲಿ ಮಧ್ಯಾಹ್ನ 12 ಗಂಟೆಗೆ  ಇರಿಸಲಾಗುತ್ತಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now