Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ವಿವಾದ : 5ನೇ ದಿನವೂ ವಾದ ಆಲಿಸಿ ನಾಳೆಗೆ ಮುಂದೂಡಿದ ಹೈಕೋರ್ಟ್

Facebook
Twitter
Telegram
WhatsApp

ಬೆಂಗಳೂರು: ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೇರಿದೆ. ಹೈಕೋರ್ಟ್ ಆದೇಶವಿದ್ದರೂ ಕೆಲವೊಂದಿಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದಾರೆ, ಪದರತಿಭಟಿಸುತ್ತಿದ್ದಾರೆ. ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, 5ನೇ ದಿನವಾದ ಇಂದು ಕೂಡ ವಾದವನ್ನ ಆಲಿಸಲಾಗಿದೆ. ಸದ್ಯ ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದ್ದು, ವಾದ ಮಂಡಿಸಲು ಸೂಚಿಸಲಾಗಿದೆ.

ವಿಚಾರಣೆ ವೇಳೆ ಸರಿಯಾಗಿ ಸಲ್ಲಿಕೆಯಾಗದ ಒಂದು ಅರ್ಜಿಯನ್ನು ವಜಾ‌ ಮಾಡಲಾಗಿದೆ. ಈ ವೇಳೆ ತ್ರಿಸದಸ್ಯ ಪೀಠದ ಮುಂದೆ ವಾದ ಮಂಡಿಸಿದ ವಕೀಲ ವಿನೋದ್ ಕುಲಕರ್ಣಿ, ಶುಕ್ರವಾರವಾದ್ರೂ ಹಿಜಾಬ್ ಧರಿಸಲು ಅನುಮತಿ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ.

ಇನ್ನು ಇದೇ ವೇಳೆ ವಕೀಲರೊಬ್ಬರು ಹೊರಗಡೆ ಈ ಪ್ರಕರಣ ಇತ್ಯರ್ಥ ಮಾಡಿಕೊಳ್ಳಲು ಅನುಮತಿ ಕೋರಿದ್ದರು. ಈ ಮನವಿಗೆ ಸ್ಪಂದಿಸಿದ ತ್ರಿಸದಸ್ಯ ಪೀಠ ಸರ್ಕಾರ ಮತ್ತು ಅರ್ಜಿದಾರರು ಇದಕ್ಕೆ ಒಪ್ಪಿದರೆ ನಮ್ಮದೇನು ಅಭ್ಯಂತರವಿಲ್ಲ ಎಂದಿದ್ದಾರೆ. ಇನ್ನು ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ನಾಳೆ ವಾದ ಮಂಡನೆ ಮಾಡುವುದರ ಜೊತೆಗೆ ಆಕ್ಷೇಪ ಅರ್ಜಿ ಸಲ್ಲಿಕೆ ಮಾಡುವ ಬಗ್ಗೆಯೂ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!