ಬೆಂಗಳೂರು .ಜುಲೈ.18 : ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಭಾನುವಾರ ಸಾಮಾನ್ಯವಾಗಿ ರಜಾ ದಿನವಾಗಿದ್ದರೂ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ವಾಸ್ತವವಾಗಿ ಕಳೆದ ಗುರುವಾರವೇ ಕ್ಯಾಬಿನೆಟ್ ಸಭೆ ನಡೆಯಬೇಕಿತ್ತು. ಆದರೆ ಪೂರ್ವನಿರ್ಧರಿತ ದೆಹಲಿ ಪ್ರವಾಸದ ಕಾರಣದಿಂದಾಗಿ ಅದನ್ನು ನಡೆಸಲು ಸಾಧ್ಯವಾಗಿರಲಿಲ್ಲ. ರಾಜ್ಯದ ಪ್ರಸಕ್ತ ಬರ ಪರಿಸ್ಥಿತಿಯ ಕುರಿತು ತಕ್ಷಣವೇ ಸುದೀರ್ಘ ಚರ್ಚೆ ನಡೆಸಬೇಕಾದ ಅನಿವಾರ್ಯತೆ ಇರುವುದರಿಂದ, ರಜಾ ದಿನವನ್ನೂ ಲೆಕ್ಕಿಸದೆ ನಾಳೆನೇ ತುರ್ತು ಸಭೆ ಆಯೋಜಿಸಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಕೇವಲ ಸಚಿವ ಸಂಪುಟ ಸಭೆಯಷ್ಟೇ ಅಲ್ಲದೆ, ನಾಳೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (DCs) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (CEOs) ಜೊತೆಯೂ ಮುಖ್ಯಮಂತ್ರಿಗಳು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ತೀವ್ರವಾಗಿ ಕಾಡುತ್ತಿರುವ ಬರಗಾಲದ ತೀವ್ರತೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಬಳಸಲು ಯಾವುದೇ ಅವಕಾಶವಿಲ್ಲ. ಬಿತ್ತನೆ ಕಾರ್ಯಗಳನ್ನು ಮಾಡಿಕೊಂಡು, ಆ ಬಳಿಕ ಬೆಳೆ ರಕ್ಷಣೆಗಾಗಿ ನೀರು ಬಿಡುವಂತೆ ಸರ್ಕಾರದ ಮೇಲೆ ಯಾರೂ ಒತ್ತಡ ಹೇರಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ. ಅಲ್ಲದೆ, ಬೆಳೆಗಳಿಗೆ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೂ ಈಗಾಗಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








