Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಜ್ಜಿಯ ಅಂತಿಮ ದರ್ಶನಕ್ಕೂ ಬರದ ಪ್ರಜ್ವಲ್ ರೇವಣ್ಣ! ಪೆರೋಲ್‌ಗೆ ಅರ್ಜಿ ಸಲ್ಲಿಸದಿರಲು ಕಾರಣವೇನು?

---Advertisement---

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದರೂ, ಅವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಹೊರಬರುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಕುಟುಂಬದ ಮೂಲಗಳ ಪ್ರಕಾರ, ಚೆನ್ನಮ್ಮ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ಅಥವಾ ತಾತ್ಕಾಲಿಕ ಬಿಡುಗಡೆಗಾಗಿ ಯಾವುದೇ ಅರ್ಜಿ ಸಲ್ಲಿಸದಿರಲು ಕುಟುಂಬವೇ ತೀರ್ಮಾನಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಅವರನ್ನು ಈ ಸಂದರ್ಭದಲ್ಲಿ ಹೊರಗೆ ಕರೆತರುವುದರಿಂದ ಕುಟುಂಬಕ್ಕೆ ಹಾಗೂ ಸಾರ್ವಜನಿಕ ವಲಯದಲ್ಲಿ ಅನಗತ್ಯ ಚರ್ಚೆ ಮತ್ತು ಮುಜುಗರ ಉಂಟಾಗಬಹುದು ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈ ಕುರಿತು ತಂದೆ ಎಚ್.ಡಿ. ರೇವಣ್ಣ ಅವರ ಸಲಹೆಯನ್ನು ಪ್ರಜ್ವಲ್ ಗೌರವಿಸಿದ್ದು, ಪೆರೋಲ್‌ಗಾಗಿ ಕಾನೂನು ಕ್ರಮ ಕೈಗೊಳ್ಳದಿರಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ, ಗಂಭೀರ ಅಪರಾಧ ಪ್ರಕರಣಗಳಲ್ಲಿ ಬಂಧನದಲ್ಲಿರುವ ಆರೋಪಿಗಳಿಗೆ ಪೆರೋಲ್ ಅಥವಾ ತಾತ್ಕಾಲಿಕ ಬಿಡುಗಡೆ ದೊರೆಯುವುದು ಸುಲಭವಲ್ಲ. ಪ್ರಕರಣದ ಸ್ವರೂಪ ಹಾಗೂ ಕಾನೂನು ನಿಯಮಗಳನ್ನು ಪರಿಗಣಿಸಿದರೆ, ಮಧ್ಯಂತರ ರಿಲೀಫ್ ದೊರೆಯುವ ಸಾಧ್ಯತೆ ಕೂಡ ಕಡಿಮೆಯಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಡುತ್ತಾರೆ.

ಈ ನಡುವೆ, ಪ್ರಜ್ವಲ್ ರೇವಣ್ಣ ಅವರ ಪರವಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಅಂಶು ಕುಮಾರ್ ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.ಕುಟುಂಬದ ಅಂತಿಮ ವಿಧಿವಿಧಾನಗಳನ್ನು ನೇರವಾಗಿ ನೋಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಮಾನವೀಯ ದೃಷ್ಟಿಯಿಂದ ಕಾರಾಗೃಹದಲ್ಲೇ ದೂರದರ್ಶನದ ಮೂಲಕ ಅಂತ್ಯಕ್ರಿಯೆಯ ನೇರಪ್ರಸಾರ ವೀಕ್ಷಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಸಮೀಪದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು, ಕಿರಿಯ ಪುತ್ರ ರಮೇಶ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಗಂಭೀರ ಆರೋಗ್ಯ ಸಮಸ್ಯೆಯ ಮುನ್ಸೂಚನೆಯಾಗಿರಬಹುದು!

ಆಸ್ಪತ್ರೆಯಲ್ಲಿ ಲಂಚ, ಕೃಷಿ ಹೊಂಡ ಗೋಲ್ ಮಾಲ್ : ಅಧಿಕಾರಿಗಳ ಬೆಂಡೆತ್ತಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ : ಚಿತ್ರದುರ್ಗದಲ್ಲಿ ಕೇಕ್ ಕತ್ತರಿಸಿ ಶುಭಹಾರೈಸಿದ ಕಾಂಗ್ರೆಸ್ ಮುಖಂಡರು

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಡಾ.ಸಿ.ಶಿವಲಿಂಗಪ್ಪ ಒತ್ತಾಯ

ಶಂಕರಾಚಾರ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಚಿತ್ರದುರ್ಗ ಬ್ರಾಹ್ಮಣ ಸಂಘ ಒತ್ತಾಯ

ಹಿರಿಯೂರಿನ ಮೊರಾರ್ಜಿ ದೇಸಾಯಿ ಶಾಲೆ ಸೇರಿ ರಾಜ್ಯದ 31 ವಸತಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಉನ್ನತೀಕರಣ : ಸರ್ಕಾರ ಆದೇಶ