Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಡದಿ ಟೌನ್‌ಶಿಪ್ ಯೋಜನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್! ಪಿಐಎಲ್ ವಜಾಗೊಳಿಸಿದ ನ್ಯಾಯಪೀಠ

---Advertisement---

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.ಮುಖ್ಯ ನ್ಯಾಯಮೂರ್ತಿ ವಿಭು ಬಕ್ರೂ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿ, ಅರ್ಜಿದಾರರು ಮಂಡಿಸಿದ ವಾದಗಳಲ್ಲಿ ಕಾನೂನುಬದ್ಧ ಆಧಾರ ಕಂಡುಬರದ ಹಿನ್ನೆಲೆಯಲ್ಲಿ ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿತು.

ಅರ್ಜಿದಾರ ಕೆ.ಬಿ. ರಾಜೇಶ್ ಪರ ವಾದ ಮಂಡಿಸಿದ ವಕೀಲರು, ಭೂಸ್ವಾಧೀನಕ್ಕೂ ಮುನ್ನ ಸಾಮಾಜಿಕ ಪರಿಣಾಮ ಅಧ್ಯಯನ (Social Impact Assessment) ನಡೆಸಿಲ್ಲ, ಪುನರ್ವಸತಿ ಕ್ರಮಗಳನ್ನು ಕೈಗೊಂಡಿಲ್ಲ ಹಾಗೂ ಯೋಜನೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಯೋಜನೆಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಯಾವ ಕಾಯ್ದೆಯ ಯಾವ ವಿಧಿಯನ್ನು ಉಲ್ಲಂಘಿಸಲಾಗಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿ” ಎಂದು ಪ್ರಶ್ನಿಸಿತು.

ಅರ್ಜಿದಾರರ ಪರ ವಕೀಲರು, ಹೊಸ ಭೂಸ್ವಾಧೀನ ಕಾಯ್ದೆಯಡಿ ಪ್ರಕ್ರಿಯೆ ಅನುಸರಿಸಲಾಗಿಲ್ಲ ಎಂದು ವಾದಿಸಿದರು. ಆದರೆ, ಸರ್ಕಾರದ ಪರವಾಗಿ ಭೂಸ್ವಾಧೀನ ಪ್ರಕ್ರಿಯೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ (KIADB/KIAD) ಕಾಯ್ದೆಯಡಿ ನಡೆದಿದ್ದು, ಪರಿಹಾರ ನೀಡುವಲ್ಲಿ ಹೊಸ ಕಾಯ್ದೆಯ ನಿಯಮಗಳನ್ನು ಅನುಸರಿಸಲಾಗಿದೆ ಎಂದು ವಿವರಿಸಲಾಯಿತು.ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಅರ್ಜಿಯಲ್ಲಿ ಸಮರ್ಪಕ ಕಾನೂನು ಆಧಾರ ಇಲ್ಲವೆಂದು ಅಭಿಪ್ರಾಯಪಟ್ಟು ಪಿಐಎಲ್ ಅನ್ನು ವಜಾಗೊಳಿಸಿತು. ಜೊತೆಗೆ, ಭೂಸ್ವಾಧೀನಕ್ಕೆ ಸಂಬಂಧಿಸಿದ ಇತರೆ ವಿಚಾರಗಳನ್ನು ಮೆರಿಟ್ ಆಧಾರದ ಮೇಲೆ ಸೂಕ್ತ ವೇದಿಕೆಯಲ್ಲಿ ಪರಿಶೀಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಗಂಭೀರ ಆರೋಗ್ಯ ಸಮಸ್ಯೆಯ ಮುನ್ಸೂಚನೆಯಾಗಿರಬಹುದು!

ಆಸ್ಪತ್ರೆಯಲ್ಲಿ ಲಂಚ, ಕೃಷಿ ಹೊಂಡ ಗೋಲ್ ಮಾಲ್ : ಅಧಿಕಾರಿಗಳ ಬೆಂಡೆತ್ತಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ : ಚಿತ್ರದುರ್ಗದಲ್ಲಿ ಕೇಕ್ ಕತ್ತರಿಸಿ ಶುಭಹಾರೈಸಿದ ಕಾಂಗ್ರೆಸ್ ಮುಖಂಡರು

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಡಾ.ಸಿ.ಶಿವಲಿಂಗಪ್ಪ ಒತ್ತಾಯ

ಶಂಕರಾಚಾರ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಚಿತ್ರದುರ್ಗ ಬ್ರಾಹ್ಮಣ ಸಂಘ ಒತ್ತಾಯ

ಹಿರಿಯೂರಿನ ಮೊರಾರ್ಜಿ ದೇಸಾಯಿ ಶಾಲೆ ಸೇರಿ ರಾಜ್ಯದ 31 ವಸತಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಉನ್ನತೀಕರಣ : ಸರ್ಕಾರ ಆದೇಶ