Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​ಜುಲೈ 25ಕ್ಕೆ ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ ; ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ವೀಕ್ಷಿಸಿದ ಶಾಸಕರು, ಅಧಿಕಾರಿಗಳು

---Advertisement---

ಚಿತ್ರದುರ್ಗ. ಜುಲೈ. 23: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ 25 ರಂದು  ನಗರದ ಅನುಭವ ಮಂಟಪದಲ್ಲಿ, ಬೆಂಗಳೂರು ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಗುರುವಾರ ಅನುಭವ ಮಂಟಪಕ್ಕೆ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮತ್ತು ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಭೇಟಿ ನೀಡಿ ಸಿದ್ದತೆ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿಗಳು ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಗೆ, ಬೆಂಗಳೂರು ವಿಭಾಗದ 9 ಜಿಲ್ಲೆಗಳ ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಇದರೊಂದಿಗೆ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿಗಳು ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಒಟ್ಟು 350 ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದು ಎಲ್ಲಾ ಸಿದ್ದತೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಮುಖ್ಯಮಂತ್ರಿಗಳು ಜುಲೈ 25 ರ ಬೆಳಗ್ಗೆ 11 ಗಂಟೆಗೆ ಹಿರಿಯೂರು ತಾಲೂಕಿನ ಎರಡ್ಮೂರು ಕಡೆಗಳಲ್ಲಿ ಬರ ಪರಿಶೀಲನೆ ನಡೆಸಿ ನಂತರ ಚಿತ್ರದುರ್ಗದ ಸಭೆಗೆ ಸಿಎಂ ಆಗಮಿಸುತ್ತಿದ್ದಾರೆ. ಈ ಸಭೆ ವಿಶೇಷವಾಗಿ ಬರಕ್ಕೆ ಪೂರಕವಾಗಿ ನಡೆಯುತ್ತಿದೆ ಎಂದರು.

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆಗಾಗಿ ಜುಲೈ 25 ಮತ್ತು 26 ರಂದು ಮುಖ್ಯಮಂತ್ರಿಗಳು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಪ್ರವಾಸದ ಅಂಗವಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಜುಲೈ 25 ರಂದು ಬೆಳಿಗ್ಗೆ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು,  ಹಿರಿಯೂರು ತಾಲ್ಲೂಕಿಗೆ ಆಗಲಿದ್ದಾರೆ. ಬಳಿಕ ಮಳೆ ಅಭಾವ ಹಾಗೂ ತೀವ್ರ ಬರದ ಹಿನ್ನೆಲೆಯಲ್ಲಿ ಒಣಗಿರುವ ಒಂದೆರಡು ಕೃಷಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಲಿದ್ದಾರೆ. ನಂತರ ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆಯವರೆಗೆ ನಗರದ ಅನುಭವ ಮಂಟಪದಲ್ಲಿ ಬೆಂಗಳೂರು ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಈ ಬೃಹತ್ ಸಭೆಯಲ್ಲಿ ಬೆಂಗಳೂರು ವಿಭಾಗಕ್ಕೆ ಒಳಪಡುವ ಒಂಬತ್ತು ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು, ಎಂಎಲ್‍ಸಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು  ಭಾಗವಹಿಸಲಿದ್ದಾರೆ ಎಂದರು.

 

ಜುಲೈ 25 ರಂದು ಸಭೆ ಹಾಗೂ ವಾಸ್ತವ್ಯದ ನಂತರ, ಜುಲೈ 26 ರಂದು ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರ ‘ನುಡಿನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಸಭೆಗೆ ಆಗಮಿಸುವ ಸಚಿವರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಅಧಿಕೃತ ಏಜೆನ್ಸಿಯಾದ ‘ಕೃಪಾದೇವಿ ಟೆಂಟ್ ಹೌಸ್’ ಮೂಲಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

 

ಭದ್ರತೆಗೆ 1,000ಕ್ಕೂ ಹೆಚ್ಚು ಪೆÇಲೀಸರ ನಿಯೋಜನೆ – ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಜುಲೈ 25ರಂದು ನಡೆಯಲಿರುವ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

 

ಜುಲೈ 25ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು, ಶಾಸಕರು ಮತ್ತು ಉನ್ನತಾಧಿಕಾರಿಗಳ ಸಮ್ಮುಖದಲ್ಲಿ ಬೆಂಗಳೂರು ಕಂದಾಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಸಭೆಯ ನಂತರ ಮುಖ್ಯಮಂತ್ರಿಯವರು ನಗರದ ಭೋವಿ ಮಠಕ್ಕೂ ಭೇಟಿ ನೀಡಲಿದ್ದು, ಎರಡೂ ಕಡೆ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುತ್ತಿದೆ ಎಂದರು.
ಜುಲೈ 26ರಂದು ಹಿರಿಯೂರಿನಲ್ಲಿ ದಿವಂಗತ ಮಾಜಿ ಸಚಿವ ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ನಿಗದಿಯಾಗಿದ್ದು, ಅಲ್ಲಿಯೂ ಕೂಡ ಸೂಕ್ತ ಪೆÇಲೀಸ್ ಭದ್ರತೆ ಒದಗಿಸಲಾಗುವುದು. ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಒಟ್ಟಾರೆಯಾಗಿ 3 ಜನ ಎಸ್ಪಿ, 8 ಜನ ಡಿವೈಎಸ್ಪಿ, 20 ಜನ ಇನ್ಸ್‍ಪೆಕ್ಟರ್‍ಗಳು, 120 ಜನ ಪಿಎಸ್‍ಐಗಳು ಹಾಗೂ 1,000ಕ್ಕೂ ಹೆಚ್ಚು ಹೆಚ್‍ಸಿ/ಪಿಸಿ ದರ್ಜೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಹೆಚ್ಚುವರಿಯಾಗಿ 8 ಕೆಎಸ್‍ಆರ್‍ಪಿ ಹಾಗೂ 10 ಡಿಎಆರ್ ತುಕಡಿಗಳನ್ನು ನಿಯೋಜಿಸಲು ಯೋಜಿಸಲಾಗಿದೆ ಎಂದರು.

ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆಯಿಂದ ಸುಗಮ ಸಂಚಾರ ನಿರ್ವಹಣೆ ಮಾಡಲಾಗುವುದು. ಜುಲೈ 25ರ ರಾತ್ರಿ ಮುಖ್ಯಮಂತ್ರಿಯವರ ವಾಸ್ತವ್ಯದ ಕುರಿತು ಅಧಿಕೃತ ಮಾಹಿತಿ ಬರಬೇಕಿದ್ದು, ಅದು ತಲುಪಿದ ತಕ್ಷಣ ಅದಕ್ಕೆ ತಕ್ಕಂತೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ತಹಶೀಲ್ದಾರ್ ಗೋವಿಂದರಾಜು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now