Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಥ್ಯಾಂಕ್ಯೂ ಫ್ರೆಂಡ್ಸ್ : ಪ್ರಧಾನಿ ಮೋದಿಯಿಂದ ಯುವಜನತೆಗೆ ಮತ್ತೊಂದು ಸೆಲ್ಫಿ ವಿಡಿಯೋ ಸಂದೇಶ

---Advertisement---

ದೆಹಲಿ.ಜುಲೈ.25: ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಗೆ ಶಾಶ್ವತ ತಡೆ ನೀಡಲು ಕೇಂದ್ರ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದ ವಿಡಿಯೋ ಸಂದೇಶಕ್ಕೆ ದೇಶದ ಯುವಜನತೆಯಿಂದ ಅಭೂತಪೂರ್ವ ಬೆಂಬಲ ಹಾಗೂ ಅತ್ಯುತ್ತಮ ಸಲಹೆಗಳು ಹರಿದುಬಂದಿವೆ.

ಇದಕ್ಕೆ ಸ್ಪಂದಿಸಿರುವ ಪ್ರಧಾನಿಯವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ವಿಡಿಯೋ ಹಂಚಿಕೊಳ್ಳುವ ಮೂಲಕ ಯುವಕರಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ. ಯುವಜನತೆಯ ಈ ಸಕಾರಾತ್ಮಕ ಬೆಂಬಲದಿಂದ ಸರ್ಕಾರದೊಂದಿಗಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ನೀಟ್-ಯುಜಿ (NEET-UG) ಪರೀಕ್ಷೆಯ ಅಕ್ರಮ ಖಂಡಿಸಿ ಪ್ರತಿಪಕ್ಷಗಳು ಸಂಸತ್ತಿನ ಒಳಗೂ ಮತ್ತು ಹೊರಗೂ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಪ್ರಧಾನಿಯವರು ಈ ಅಭಯ ನೀಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತೀವ್ರ ನೋವುಂಟುಮಾಡುವ ವಿಷಯ ಎಂಬುದನ್ನು ತಾವು ಬಲ್ಲೆ ಎಂದಿರುವ ಮೋದಿ, ಈಗಾಗಲೇ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಆರೋಪಿಗಳು ಜೈಲುಪಾಲಾಗಿದ್ದಾರೆ ಎಂದಿದ್ದಾರೆ. ಸುಮಾರು 22 ಲಕ್ಷ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ಅತ್ಯಲ್ಪ ಅವಧಿಯಲ್ಲಿ ಮರು ಪರೀಕ್ಷೆ ನಡೆಸಿ, ಇತ್ತೀಚೆಗಷ್ಟೇ ಫಲಿತಾಂಶವನ್ನೂ ಯಶಸ್ವಿಯಾಗಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಫಾಸ್ಟ್-ಟ್ರ್ಯಾಕ್ ಕೋರ್ಟ್ ರಚನೆಗೆ ವಿಧೇಯಕ
ಕೇವಲ ಪರೀಕ್ಷೆ ನಡೆಸಿ ಫಲಿತಾಂಶ ನೀಡುವುದಕ್ಕೆ ಸರ್ಕಾರ ಸೀಮಿತವಾಗಿಲ್ಲ ಎಂದಿರುವ ಪ್ರಧಾನಿ, ಇಂತಹ ಪ್ರಕರಣಗಳ ಶೀಘ್ರ ವಿಚಾರಣೆಗೆ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು (Fast-Track Courts) ಸ್ಥಾಪಿಸುವ ಕರಡು ಮಸೂದೆ ಸಿದ್ಧಪಡಿಸಲಾಗಿದೆ ಎಂದಿದ್ದಾರೆ. ಈ ಕಠಿಣ ಕಾನೂನು ಮಸೂದೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ, ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಅಧಿವೇಶನದಲ್ಲೇ ಅಂಗೀಕರಿಸಲು ಸರ್ಕಾರ ಯೋಜನೆ ರೂಪಿಸಿದೆ. ಯುವಜನತೆಯ ಭವಿಷ್ಯಕ್ಕಿಂತ ಮುಖ್ಯವಾದದ್ದು ಮತ್ತೊಂದಿಲ್ಲ; ಅವರ ಭವಿಷ್ಯಕ್ಕೆ ಕಂಟಕವಾಗುವ ಯಾವುದೇ ಶಕ್ತಿಗಳನ್ನು ಸರ್ಕಾರ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಎಚ್ಚರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now