Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಜರಂಗದಳ ಕಾರ್ಯಕರ್ತ ಹರ್ಷ ಅಂತಿಮಯಾತ್ರೆಯಲ್ಲಿ ಜನವೋ ಜನ..!

Facebook
Twitter
Telegram
WhatsApp

ಶಿವಮೊಗ್ಗ: ನಿನ್ನೆ ರಾತ್ರಿ ಟೀ ಕುಡಿಯುತ್ತಾ ನಿಂತಿದ್ದಾಗ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಮೇಲೆ ದಾಳಿ ನಡೆದಿತ್ತು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಹರ್ಷ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಯೋಜನವಾಗಲಿಲ್ಲ. ಇದೀಗ ವಿದ್ಯಾನಗರ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.

ಕಾಳಿ ಸ್ವಾಮಿ ನೇತೃತ್ವದಲ್ಲಿ ಕ್ಷತ್ರೀಯ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮಾಡಿ, ಅಂತ್ಯಸಂಸ್ಕಾರ ಮಾಡಲಾಗಿದೆ. ಇನ್ನು ಹರ್ಷ ಅಂತ್ಯ ಸಂಸ್ಕಾರಕ್ಕೂ ಮುನ್ನ ಮೆರವಣಿಗೆ ಮಾಡಲಾಯಿತು.

ಸುಮಾರು 5 ಕಿಲೋ ಮೀಟರ್ ವರೆಗೆ ಹರ್ಷ ಮೃತ ದೇಹವನ್ನ ಮೆರವಣಿಗೆ ಮಾಡಿ ಸಾಗಿಸಲಾಗಿತ್ತು. ಈ ವೇಳೆ ಹಾದಿಯುದ್ದಕ್ಕೂ ಜನಸ್ತೋಮವೇ ನೆರೆದಿತ್ತು. ಅಷ್ಟೇ ಅಲ್ಲ ಮೆರವಣಿಗೆಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ ಕೂಡ ಭಾಗವಹಿಸಿದ್ದರು.

ಇನ್ನು ಶಿವಮೊಗ್ಗದಲ್ಲಿ ಪರಿಸ್ಥಿತಿ ನಿರೀಕ್ಷೆಗೂ ಮೀರಿತ್ತು. ಜನಸ್ತೋಮದ ನಡುವೆ ಅಹಿತಕರ ಘಟನೆಗಳು ನಡೆದಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನೆರೆದಿದ್ದರು ಕೂಡ, ಕಲ್ಲು ತೂರಾ, ಹೊಡೆದಾಟದಂತ ಘಟನೆಗಳು ನಡೆದಿವೆ. ಹಾಗೋ ಹೀಗೋ ಪರಿಸ್ಥಿತಿ ನಿಯಂತ್ರಿಸಿ, ಅಂತ್ಯಸಂಸ್ಕಾರವನ್ನ ನೆರವೇರಿಸಿದ್ದಾರೆ. ಹರ್ಷ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!