Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ಷ ಕೊಲೆ ಪ್ರಕರಣ : ಭಾವಸಾರ ಕ್ಷತ್ರಿಯ ಸಮಾಜದಿಂದ ಪ್ರತಿಭಟನೆ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.22) : ಭಾವಸಾರ ಕ್ಷತ್ರಿಯ ಸಮುದಾಯದ ಯುವಕ ಹರ್ಷ ಜಿಂಗಾಡೆಯನ್ನು ಕಳೆದ ಭಾನುವಾರ ಶಿವಮೊಗ್ಗದಲ್ಲಿ ಅನ್ಯ ಕೋಮಿನವರು ಹತ್ಯೆ ನಡೆಸಿರುವುದನ್ನು ವಿರೋಧಿಸಿ ಭಾವಸಾರ ಕ್ಷತ್ರಿಯ ಸಮಾಜದವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ದರ್ಜಿ ವೃತ್ತಿ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿದ್ದ 23 ವರ್ಷದ ಹರ್ಷ ಜಿಂಗಾಡೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿರುವುದರಿಂದ ಇಡೀ ಶಿವಮೊಗ್ಗ ನಗರವೇ ಆತಂಕದಲ್ಲಿದೆ. ಹತ್ಯೆಯ ಹಿಂದೆ ಯಾರೆ ಪ್ರಭಾವಿಗಳಿದ್ದರೂ ಕಾನೂನು ರೀತಿ ಶಿಕ್ಷಿಸಿ ಹತ್ಯೆಗೀಡಾಗಿರುವ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ 25 ಲಕ್ಷ ರೂ.ಗಳ ಪರಿಹಾರ ಘೋಷಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದೇಶದ ಎಲ್ಲಾ ಭಾಗಗಳಲ್ಲಿಯೂ ಭಾವಸಾರ ಕ್ಷತ್ರಿಯ ಸಮುದಾಯದವರು ದರ್ಜಿ ವೃತ್ತಿ ಮಾಡಿಕೊಂಡು ದಿನನಿತ್ಯದ ಬದುಕು ಸಾಗಿಸುತ್ತಿದ್ದಾರೆ. ಯಾರ ಜೊತೆಯೂ ಸಂಘರ್ಷಕ್ಕೆ ಇಳಿದಿದವರಲ್ಲ. ಶಾಂತಿಪ್ರಿಯರು ಬೇರೆ ಕೋವಿನವರ ಜೊತೆ ಅನ್ಯೋನ್ಯತೆಯಿಂದ ಇದ್ದೇವೆ. ಆದರೂ ಕ್ಷÄಲ್ಲಕ ಕಾರಣಕ್ಕೆ ಹರ್ಷ ಜಿಂಗಾಡೆಯನ್ನು ಹತ್ಯೆಗೈದಿರುವುದು ಅತ್ಯಂತ ಖಂಡನೀಯ. ಹತ್ಯೆ ಹಿಂದೆ ಯರ‍್ಯಾರ ಕೈವಾಡವಿದೆ ಎನ್ನುವುದನ್ನು ಕೂಲಂಕುಷ ತನಿಖೆ ನಡೆಸಿ ಕೊಲೆಗಡುಕರಿಗೆ ಹಾಗೂ ಕುಮ್ಮಕ್ಕು ನೀಡಿದವರಿಗೆ ತಕ್ಕ ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾನಿರತರು ಸರ್ಕಾರವನ್ನು ಆಗ್ರಹಿಸಿದರು.

ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಶ್ಯಾಂ ಮುಸಳೆ, ಉಪಾಧ್ಯಕ್ಷ ಸಂತೋಷ್‌ಬಾಬು ಮಹಳತ್ಕರ್, ಕಾರ್ಯದರ್ಶಿ ಜಿ.ಎಸ್.ನಾಗರಾಜ್, ಸಮುದಾಯದ ಮುಖಂಡರುಗಳಾದ ಕೃಷ್ಣ ಪಟಿಗ, ಡಿ.ಎನ್.ಮಮತ, ಸಿ.ಟಿ.ವಾಸುದೇವರಾವ್, ಬಿ.ಎಸ್.ನಾಗರಾಜ, ಹೆಚ್.ಎನ್.ಮಂಜುನಾಥರಾವ್, ಜಿ.ಕೆ.ಶ್ರೀಧರ್, ಜಯರಾಮರಾವ್ ಗುಜ್ಜರ್, ಡಾ.ಪ್ರಭಾಕರ್ ಹಂಚಾಟೆ, ವಾಸುದೇವರಾವ ಮುಸಳೆ, ಮಧುಸೂಧನ್ ಅಂಬೇಕರ್, ಶ್ರೀಮತಿ ಮಮತ ಪರಶುರಾಮ್ ಬೇದ್ರೆ, ಮಂಜುನಾಥರಾವ್ ಗುಜ್ಜರ್, ಗಿರೀಶ್ ಮುಸಳೆ, ನಾಗರಾಜ್‌ಬೇದ್ರೆ, ಶ್ರೀನಾಥ್‌ಬೇದ್ರೆ, ರಾಜೇಶ್‌ಬೇದ್ರೆ, ಶ್ರೀದರ್ ಗುಜ್ಜರ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!