Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆ..2ಕ್ಕೆ 3400 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿಗಳು ಹೀಗಿವೆ!

---Advertisement---

ಬೆಂಗಳೂರು.ಜುಲೈ.31: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3,400 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆಗಸ್ಟ್ 2 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಪರೀಕ್ಷಾ ಪ್ರಕ್ರಿಯೆಯನ್ನು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಸಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕರ್ತವ್ಯಕ್ಕಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು, ಮಾರ್ಗಾಧಿಕಾರಿಗಳು ಹಾಗೂ ವಿಶೇಷ ಜಾಗೃತ ದಳಗಳನ್ನು ರಚಿಸಲಾಗಿದ್ದು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಅಭ್ಯರ್ಥಿಗಳಿಗೆ ಅನಗತ್ಯ ಕಿರಿಕಿರಿ ಉಂಟಾಗದಂತೆ ನಿಗಾ ವಹಿಸಲು ಸಿಬ್ಬಂದಿಗೆ ಖಡಕ್ ಸೂಚನೆ ನೀಡಲಾಗಿದೆ. ಪರೀಕ್ಷೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಭಿಯಂತರರಿಗೂ ಮನವಿ ಮಾಡಲಾಗಿದೆ.

ಕಟ್ಟುನಿಟ್ಟಿನ ವಸ್ತ್ರಸಂಹಿತೆ ಮತ್ತು ಪರೀಕ್ಷಾ ನಿಯಮಗಳು:

ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು (Dress Code) ಜಾರಿಗೆ ತರಲಾಗಿದೆ. ಅಭ್ಯರ್ಥಿಗಳು ಉದ್ದನೆ ತೋಳಿನ ಶರ್ಟ್ ಹಾಗೂ ಶೂಗಳನ್ನು ಧರಿಸಿಕೊಂಡು ಬರುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇದರೊಂದಿಗೆ ಎಲೆಕ್ಟ್ರಾನಿಕ್ ಉಪಕರಣಗಳು, ಕ್ಯಾಲ್ಕುಲೇಟರ್, ಸ್ಮಾರ್ಟ್‌ವಾಚ್, ಮೊಬೈಲ್ ಫೋನ್, ನೋಟ್ಸ್‌ಗಳು, ಬ್ಯಾಗ್ ಹಾಗೂ ಆಹಾರ ಮತ್ತು ಪಾನೀಯಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಪರೀಕ್ಷೆಯ ದಿನದಂದು ಅಕ್ರಮಗಳನ್ನು ತಡೆಯಲು ಕೇಂದ್ರಗಳಲ್ಲಿ ಬ್ಲೂಟೂತ್ ಜಾಮರ್‌ಗಳನ್ನು ಅಳವಡಿಸಲಾಗುವುದು. ಅಲ್ಲದೆ, ಪ್ರತಿಯೊಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, 144ನೇ ಕಾಯ್ದೆಯಡಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುವುದು, ಗುಂಪುಗೂಡುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭಗಳನ್ನು ನಡೆಸುವುದು ನಿಷಿದ್ಧವಾಗಿದೆ. ಸುರಕ್ಷತೆಯ ಮುನ್ನೆಚ್ಚರಿಕೆಯಾಗಿ ಪರೀಕ್ಷಾ ಸಮಯದವರೆಗೆ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರ ತಲುಪುವಂತೆ ಸೂಚಿಸಲಾಗಿದೆ. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಕೊಠಡಿಗಳಲ್ಲಿ ಶುದ್ಧ ಗಾಳಿ, ಬೆಳಕು, ಗೋಡೆ ಗಡಿಯಾರ, ಕುಡಿಯುವ ನೀರು ಹಾಗೂ ನೈರ್ಮಲ್ಯಯುತ ಶೌಚಾಲಯದ ವ್ಯವಸ್ಥೆಯನ್ನು ಒದಗಿಸಲು ಮೇಲ್ವಿಚಾರಕರಿಗೆ ಪ್ರಾಧಿಕಾರವು ನಿರ್ದೇಶನ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ: ದೊಡ್ಡಿಗನಾಳ್‌ ಬಳಿ ಅನುಮಾನಾಸ್ಪದ ರೀತಿಯಲ್ಲಿ ಎರಡು ಚಿರತೆ ಮರಿಗಳ ಸಾವು: ಸ್ಥಳೀಯರಲ್ಲಿ ಆತಂಕ

ಚಿತ್ರದುರ್ಗ : ತಮಟಕಲ್ಲು ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವು

ದಿನನಿತ್ಯದ ಈ ಸಣ್ಣ ತಪ್ಪುಗಳಿಂದ ಹಾಳಾಗಬಹುದು ನಿಮ್ಮ ಕಿಡ್ನಿ!

ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನ: ಧೂಮಪಾನ ಮಾತ್ರವಲ್ಲ, ಈ ದೈನಂದಿನ ಅಭ್ಯಾಸಗಳೂ ಶ್ವಾಸಕೋಶದ ಆರೋಗ್ಯಕ್ಕೆ ಮಾರಕ!

ಜಲಾಶಯದ ನೀರು ಇನ್ಮುಂದೆ ಕುಡಿಯಲು ಮಾತ್ರ ಕಾಯ್ದಿರಿಸಲು ಸರಕಾರದ ಆದೇಶ

ಪೇಟೆಂಟ್ ರಿಜಿಸ್ಟ್ರೇಷನ್, ಉತ್ಪನ್ನ ಅಭಿವೃದ್ಧಿ, ವಿನ್ಯಾಸ, ನವಾನ್ವೇಷಣೆ, ಸಂಶೋಧನೆಗೆ ಪ್ರೋತ್ಸಾಹ, ಪ್ರಾಯೋಗಿಕ ಬೋಧನಾ ಕೌಶಲ್ಯದ ಉನ್ನತೀಕರಣ ಹಾಗೂ ಪೋಷಕರ ಸೂಕ್ತ ಉತ್ತೇಜನದ ಮೂಲಕ ವಿದ್ಯಾರ್ಥಿಗಳ ಮಾನಸಿಕ ವಿಕಸನದೊಂದಿಗೆ ಜಾಗತಿಕ ಶೈಕ್ಷಣಿಕ ನಾಗಲೋಟಕ್ಕೆ ಹೊಂದಿಕೊಳ್ಳುವುದನ್ನು ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಆದ್ಯತೆಯಾಗಿಸಿಕೊಳ್ಳಬೇಕು