ಚಿತ್ರದುರ್ಗ. ಆ.05: ಚಿತ್ರದುರ್ಗ ನಗರದ ಹಲವು ಪ್ರದೇಶಗಳು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಎ.ಬಿ.ಸಿ. ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಆಗಸ್ಟ್ 6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-18 ಯೂನಿವರ್ಸಿಟಿ, ವೈಭವ ಲೇಔಟ್, ತುರುವನೂರು ರಸ್ತೆ, ಪಿಳ್ಳೇಕೇರನಹಳ್ಳಿ, ಬಸವೇಶ್ವರ ನಗರ, ಮಲ್ಲಾಪುರ, ಮಲ್ಲಾಪುರ ಗೊಲ್ಲರಹಟ್ಟಿ, ಜಿ.ಆರ್. ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.










