Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಮನ್ ವೆಲ್ತ್ ಕಂಚಿನ ಪದಕ ವಿಜೇತೆ ಕೆ.ಎಸ್.ಶಿಲ್ಪಾಗೆ ₹15 ಲಕ್ಷ ನಗದು, ಸರ್ಕಾರಿ ಹುದ್ದೆ!

---Advertisement---

ಬೆಂಗಳೂರು.ಆಗಸ್ಟ್.7: ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ನಡೆದ ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸಿ ದೇಶ ಹಾಗೂ ರಾಜ್ಯದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ ಹೆಮ್ಮೆಯ ಕನ್ನಡಿಗಿ ಕೆ.ಎಸ್. ಶಿಲ್ಪಾ ಅವರಿಗೆ ರಾಜ್ಯ ಸರ್ಕಾರ ಬಹುಮಾನ ಹಾಗೂ ಗೌರವವನ್ನು ಘೋಷಿಸಿದೆ.

ಶಿಲ್ಪಾ ಅವರ ಈ ಐತಿಹಾಸಿಕ ಸಾಧನೆಯನ್ನು ಗುರುತಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ₹15 ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರದ ಗ್ರೂಪ್-ಬಿ ಹುದ್ದೆಯನ್ನು ನೀಡಲು ತೀರ್ಮಾನಿಸಿದೆ.

 

ಸವಾಲುಗಳ ನಡುವೆಯೂ ಕ್ರೀಡಾರಂಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವ ಶಿಲ್ಪಾ ಅವರ ಶ್ರಮವು, ಗ್ರಾಮೀಣ ಭಾಗದ ಸಾವಿರಾರು ಯುವ ಕ್ರೀಡಾಪಟುಗಳಿಗೆ ದೊಡ್ಡ ಸ್ಪೂರ್ತಿಯಾಗಿದೆ ಎಂದು ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.

Join WhatsApp

Join Now

Join Telegram

Join Now