Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ, ಖಾಸಗಿ ಶಾಲೆಯ ವ್ಯಾಮೋಹ ಬಿಡಿ: ಜಿ. ಎಸ್. ಮಂಜುನಾಥ್ ಕರೆ

---Advertisement---

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 10 : ಸರ್ಕಾರಿ ಶಾಲೆಗಳು ನಮ್ಮ ಪುರಾತನ ಕಾಲದಿಂದಲೂ ಇವೆ. ಇತ್ತೀಚಿಗೆ ಖಾಸಗಿ ಶಾಲೆಗಳ ಪ್ರಾರಂಭವಾದಾಗಿನಿಂದ ಸರ್ಕಾರಿ ಶಾಲೆಗೆ ಪೋಷಕರು ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ನಾವೆಲ್ಲ ಸರ್ಕಾರಿ ಶಾಲೆಯಲ್ಲಿ ಓದಿ ಕೃಷಿ ಮತ್ತು ಉದ್ಯಮವನ್ನು ಕಟ್ಟಿಕೊಂಡಿದ್ದೇವೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಯ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎಂದು ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಎಸ್. ಮಂಜುನಾಥ್ ಹೇಳಿದರು.

ಅವರು ತಾಲ್ಲೂಕಿನ ಭೀಮಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವದ ಪ್ರಯುಕ್ತ ಮಕ್ಕಳಿಗೆ ಉಚಿತವಾಗಿ ಡಬ್ ಸಟ್ ವಿತರಣೆ ಮಾಡಿ ಮಾತನಾಡಿದರು.

ಈ ಶಾಲೆಯಲ್ಲಿ ಇತ್ತೀಚಿಗೆ ವಾಮಾಚಾರ ಮಾಡಿರುವ ಸಂಗತಿ ತಿಳಿದು ಬಂದಿದೆ. ಆದುದರಿಂದ ನಾನು ನನ್ನ ಸ್ವಂತ ಖರ್ಚಿನಲ್ಲಿ ಸಿಸಿಟಿವಿ ಹಾಕಿಸಿಕೊಡುತ್ತೇನೆ. ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯ ಬಗ್ಗೆ ಗಮನ ಹರಿಸಬೇಕು ಎಂದರು.ವೇದಾಂತ ಕಂಪನಿಯಿಂದ ಕಾಂಪೌಂಡ್ ನಿರ್ಮಾಣ ಮಾಡಿದ್ದು ಅದರ ಇನ್ನುಳಿದ ಕಾಮಗಾರಿ ಸ್ಥಗಿತಗೊಂಡಿದೆ. ಆದಷ್ಟು ಬೇಗ ಮೈನಿಂಗ್ ಕಂಪನಿಯ ಸಿಬ್ಬಂದಿ ವರ್ಗ ಕಾಂಪೌಂಡ್ ನಿರ್ಮಾಣ ಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಮಕ್ಕಳು, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now