Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ ನಲ್ಲೇ 2 ತಿಂಗಳ ಪಡಿತರ ಧಾನ್ಯ ವಿತರಣೆ, ಆಗಸ್ಟ್ 15ರೊಳಗೆ ಎಲ್‌ಪಿಜಿ ಇ-ಕೆವೈಸಿ ಪೂರ್ಣಗೊಳಿಸಲು ಸೂಚನೆ

---Advertisement---

ಬಳ್ಳಾರಿ.ಆಗಸ್ಟ್.11: ಬಿ.ಪಿ.ಸಿ ಎಲ್.ಪಿ.ಜಿ ಗ್ರಾಹಕರು ಆಗಸ್ಟ್ 15 ರೊಳಗೆ ತಮಗೆ ಸಂಬಂಧಿಸಿದ ಎಲ್.ಪಿ.ಜಿ ಅನಿಲ ವಿತರಕರ ಬಳಿ ತೆರಳಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.

ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅನಿಲ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಂಡು ತೊಂದರೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

ಅದೇರೀತಿಯಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಗಸ್ಟ್ ಹಾಗೂ ಸೆಪ್ಟೆಂಬರ್-2026 ರ ಮಾಹೆಯ ಪಡಿತರ ಆಹಾರಧಾನ್ಯವನ್ನು ಆಗಸ್ಟ್ ಮಾಹೆಯಲ್ಲೇ ಒಟ್ಟಿಗೆ ವಿತರಿಸಲಾಗುತ್ತಿದೆ.

ಅಂತ್ಯೋದಯ ಕಾರ್ಡುದಾರರಿಗೆ 2 ತಿಂಗಳ ಪಡಿತರವಾಗಿ ಒಟ್ಟು 42 ಕೆ.ಜಿ. ಜೋಳ ಹಾಗೂ 28 ಕೆ.ಜಿ. ಅಕ್ಕಿ ನೀಡಲಾಗುತ್ತದೆ. ಬಿ.ಪಿ.ಎಲ್ ಕಾರ್ಡುದಾರರಿಗೆ ಕಾರ್ಡಿನ ಪ್ರತಿ ಸದಸ್ಯರಿಗೆ 2 ತಿಂಗಳಿಗೆ 6 ಕೆ.ಜಿ. ಜೋಳ ಹಾಗೂ 4 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ರಾಜ್ಯ ಪಡಿತರ ಚೀಟಿದಾರರಿಗೆ 10 ಕೆ.ಜಿ. ಅಕ್ಕಿ ಮಾತ್ರ ನೀಡಲಾಗುತ್ತದೆ.

2 ತಿಂಗಳ ಪಡಿತರ ಪಡೆಯುವುದರಿಂದ ನ್ಯಾಯಬೆಲೆ ಅಂಗಡಿಯಲ್ಲಿ 2 ಬಾರಿ ಬಯೋಮೆಟ್ರಿಕ್ ದಾಖಲಿಸಿ ಪಡಿತರ ಪಡೆಯಬೇಕು ಮತ್ತು ಎಲ್ಲಾ ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕಾರ್ಡಿನಲ್ಲಿ ಹೆಸರಿರುವ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಪೂರ್ಣಗೊಳಿಸಬೇಕು.

ಪಡಿತರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರು ಅಥವಾ ಅಕ್ರಮಗಳಿದ್ದಲ್ಲಿ ಸಂಬಂಧಿಸಿದ ತಾಲೂಕು ತಹಶೀಲ್ದಾರ್ ಕಚೇರಿ ಅಥವಾ ಆಹಾರ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ, ಬಳ್ಳಾರಿ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now