ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 11 : ನಗರದ ಜೆಸಿಆರ್ ಬಡಾವಣೆಯ ನಿವಾಸಿ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಹಾಗೂ ಹೇಮರಡ್ಡಿ ಮಲ್ಲಮ್ಮ ಸಮಾಜದ ಉಪಾಧ್ಯಕ್ಷರಾದ ಆರ್. ಡಿ. ತಿಪ್ಪೇಸ್ವಾಮಿ (86 ವರ್ಷ) ಅನಾರೋಗ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಜೆಸಿಆರ್ ಬಡಾವಣೆಯ ನಿವಾಸದಲ್ಲಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತಾಲ್ಲೂಕಿನ ಚಿಕ್ಕಪ್ಪನಹಳ್ಳಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 1:00 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಅವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ಆರ್. ಡಿ. ತಿಪ್ಪೇಸ್ವಾಮಿ ಅವರ ನಿಧನಕ್ಕೆ
ಹೇಮರಡ್ಡಿ ಮಲ್ಲಮ್ಮ ಸಮಾಜದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಕಂಬನಿ ಮಿಡಿದಿದ್ದು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.









