Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​’ಭಾರತ ಮತ್ತೆ ಅಖಂಡವಾಗಲೇಬೇಕು’: ಚಿತ್ರದುರ್ಗದ ಪಂಜಿನ ಮೆರವಣಿಗೆಯಲ್ಲಿ ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಕರೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ. 14 : ಅಖಂಡ ಭಾರತ ಸಂಕಲ್ಪ ದಿನ ನಿಮಿತ್ತ ನಗರದಲ್ಲಿ ಗುರುವಾರ ರಾತ್ರಿ ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.

ಈ ಸಂಘಟನೆಯ ಕಾರ್ಯಕರ್ತರು ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇಶದ ಪರಂಪರೆ, ಸಮಗ್ರತೆ, ಏಕತೆ, ಅಹಿಂಸಾ ತತ್ವ, ಪ್ರಜಾಪ್ರಭುತ್ವ, ಸಂವಿಧಾನ, ದೇಶದ ಪರಂಪರೆ, ಸಂಸ್ಕೃತಿ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಮುಂದಿನ ಪೀಳಿಗೆಗೆ ದೇಶವನ್ನು ಭಾರತವಾಗಿಯೇ ಉಳಿಸಬೇಕಾದರೆ, ನೆಮ್ಮದಿಯ ಬದುಕು ಸಾಗಿಸಬೇಕಾದರೆ ಭಾರತಕ್ಕಾಗಿ ಬದುಕನ್ನು ಬಲಿಕೊಟ್ಟ ದೇಶಭಕ್ತರ ಬಲಿದಾನ ಸಾರ್ಥಕವಾಗಬೇಕಾದರೆ ಭಾರತ ಮತ್ತೆ ಅಖಂಡವಾಗಲೇಬೇಕು ದೇಶ ವಿಭಜನೆ, ಸ್ವಾರ್ಥ, ಅಧಿಕಾರದ ದುರಾಸೆ, ದುರ್ಬಲ ನಾಯಕತ್ವದ ಮೂರ್ಖ ನಿರ್ಣಯದ ಪಾಪದ ಫಲವೇ ಅಖಂಡವಾಗಿದ್ದ ಭಾರತವನ್ನು ತುಂಡರಿಸಿದೆ. ಜಗತ್ತಿನ ಅಶಾಂತಿಗೆ ಕಾರಣವಾದ ಪಾಕಿಸ್ತಾನ, ಬಾಂಗ್ಲಾದೇಶಗಳ ಹುಟ್ಟಿಗೆ ಕಾರಣವೇ ಅಂದಿನ ನಾಯಕರು. ಇದು ಕೇವಲ ಭಾರತವನ್ನು ಭಗ್ನಗೊಳಿಸಿದ ಘಟನೆ ಮಾತ್ರವಲ್ಲ, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಲಕ್ಷಾಂತರ ಹುತಾತ್ಮ ದೇಶ ಭಕ್ತರಿಗೆ ಎಸಗಿದ ಮಹಾದ್ರೋಹ ಎಂದು ದೂರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now