ದೆಹಲಿ.ಆಗಸ್ಟ್.17: ಮುಂಬರುವ ಪ್ರಮುಖ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು ಪಕ್ಷದ ನೂತನ ರಾಷ್ಟ್ರೀಯ ತಂಡವನ್ನು ಘೋಷಿಸಿದ್ದಾರೆ. ಹೊಸ ತಂಡದಲ್ಲಿ ಹಲವು ಹಿರಿಯ ನಾಯಕರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿದ್ದು, ಕೆಲವರಿಗೆ ಮತ್ತೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಮ್ ಮಾಧವ್ ಹಾಗೂ ಬೈಜಯಂತ್ ಪಾಂಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಹಿರಿಯ ನಾಯಕರಿಗೆ ಪಕ್ಷದ ಸಂಘಟನೆಯಲ್ಲಿ ಮತ್ತೊಮ್ಮೆ ಪ್ರಮುಖ ಸ್ಥಾನ ನೀಡಲಾಗಿದೆ.
BJP chief Nitin Nibin announces names of new office bearers.
Vasundhara Raje Scindia, Tirath Singh Rawat, Ram Madhav, Baijyant Jay Panda, D Purandeshwari, Rekha Verma, Varshaben Narendrabhai Doshi, Bharti Pravin Pawar, Manpreet Singh Badal, Lal Singh Arya, M. Nagaraja, Tariq… pic.twitter.com/dnPE95CDVY
— ANI (@ANI) August 17, 2026
ಇನ್ನು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ವಿನೋದ್ ತಾವ್ಡೆ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಸ್ಮೃತಿ ಇರಾನಿ ಅವರಿಗೆ ಮತ್ತೆ ಪಕ್ಷದ ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಜವಾಬ್ದಾರಿ ಸಿಕ್ಕಿರುವುದು ಗಮನಾರ್ಹವಾಗಿದೆ.
ಅದೇ ರೀತಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಬಿಜೆಪಿ ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ.
ಮುಂಬರುವ ರಾಜ್ಯ ಚುನಾವಣೆಗಳು ಹಾಗೂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಹೊಸ ತಂಡ ರಚಿಸಲಾಗಿದೆ ಎಂದು ಹೇಳಲಾಗಿದೆ. ಹಿರಿಯ ನಾಯಕರಿಗೆ ಪ್ರಮುಖ ಹುದ್ದೆಗಳನ್ನು ನೀಡುವ ಮೂಲಕ ಬಿಜೆಪಿ ಚುನಾವಣಾ ತಂತ್ರಗಾರಿಕೆಗೆ ಹೊಸ ವೇಗ ನೀಡಲು ಮುಂದಾಗಿದೆ.












