Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: 69ನೇ ವರ್ಷದ ಶ್ರೀ ಪ್ರಸನ್ನ ಗಣಪತಿ ಪೂಜಾ ಮಹೋತ್ಸವ; ಆನೆ ಬಾಗಿಲು ಆವರಣದಲ್ಲಿ ಪೆಂಡಾಲ್ ನಿರ್ಮಾಣಕ್ಕೆ ಭೂಮಿ ಪೂಜೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ. ಆ.17 : ನಗರದ ಆನೆ ಬಾಗಿಲ ಬಳಿ ಇರುವ ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿವತಿಯಿಂದ 69ನೇ ವರ್ಷದ ಶ್ರೀ ಪ್ರಸನ್ನ ಗಣಪತಿಯ ಪೂಜಾ ಮಹೋತ್ಸ ವದ ಅಂಗವಾಗಿ ಸೋಮವಾರ ಪೆಂಡಲ್ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೇರವೇರಿಸಲಾಯಿತು.

ಸೆ.14 ರಿಂದ 24ರವರೆಗೆ 69ನೇ ವರ್ಷದ ಶ್ರೀ ಪ್ರಸನ್ನ ಗಣಪತಿಯ ಪೂಜಾ ಕಾರ್ಯಕ್ರಮ ನಡೆಯಲಿದೆ, ಇದರಲ್ಲಿ ಶಿವಮೊಗ್ಗದ ಶಿಲ್ಪಿಗಳಾದ ರಾಮಕೃಷ್ಣ ಪಾಂಡುರಂಗ ಇವರಿಂದ ನಿರ್ಮಾಣವಾದ ಶ್ರೀ ಪ್ರಸನ್ನ ಗಣಪತಿ ಹಾಗೂ ರಾಜು ಜಿ.ಎಂ. ನಿರ್ಮಾಣ ಚಿತ್ತಾಕರ್ಷಕವಾದ ಪೆಂಡಾಲ್ ನಿರ್ಮಾಣವಾಗಲಿದ್ದು, ಪ್ರತಿ ದಿನ ಗಣಪತಿಗೆ ನವಗ್ರಹ ಹೋಮ, ಸಹಸ್ರನಾಮ ಕುಂಕುಮಾರ್ಚನೆ, ಮಹಾ ಮಂಗಳಾರತಿ ಪ್ರಸಾದ್ ವಿನಿಯೋಗ ಕಾರ್ಯಕ್ರಮ ನಡೆಯಲಿದ್ದು ಸೆ.15 ರಿಂದ 23ರವರೆಗೆ ಪ್ರತಿ ದಿನ ಸಂಜೆ 6 ಗಂಟೆಯಿಂದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ಸೆ, 23ರಂದು ನವಗ್ರಹ ಹೋಮ, ಸಹಸ್ರ ಮೋದಕ ಗಣಹೋಮ. ಪೂರ್ಣಹುತಿ ನಡೆಯಲಿದ್ದು ಸೆ, 24ರ ಸಂಜೆ 6 ಗಂಟೆಯಿಂದ ಸಕಲ ದೇವ ಮರ್ಯಾದೆಗಳೊಂದಿಗೆ ಶ್ರೀ ಪ್ರಸನ್ನ ಗಣಪತಿ ಉತ್ಸವ ನಡೆಯಲಿದ್ದು, ರಾತ್ರಿ 10.30ಕ್ಕೆ ಚಂದ್ರವಳ್ಳಿ ಕರೆಯಲ್ಲಿ ಗಣಪತಿಯನ್ನು ಉದ್ಘಾಸನೆ ಕಾರ್ಯಕ್ರಮ ನಡೆಯಲಿದೆ.

 

ಈ ಸಂದರ್ಭದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಅಧ್ಯಕ್ಷರಾದ ಎಲ್.ಎನ್.ರಾಜಕುಮಾರ್, ಉಪಾಧ್ಯಕ್ಷರಾದ ಆನಂದ್,ನಾರಾಯಣರಾವ್, ಕಾರ್ಯದರ್ಶಿ ನಾಗರಾಜ್ ಬೇದ್ರೇ, ಖಂಜಾಚಿ ಶ್ಯಾಮ್ ಪ್ರಸಾದ್, ಸಹ ಕಾರ್ಯದರ್ಶಿ ರಮೇಶ್ ಕುಮಾರ್, ನಿರ್ದೆಶಕರಾದ ಕೃಷ್ಣಜಿರಾವ್, ಎ.ಟಿ.ರಮೇಶ್, ಆನಿತ ರಾಜಕುಮಾರ್, ಜಿಎಂ.ರಾಜು. ಸಿದ್ದಲಿಂಗೇಶ್ವರ ಪ್ರದೀಪ್ ಕುಮಾರ್, ವಿದ್ಯಾ ಸಾಗರ್ ಚಂದ್ರಶೇಖರ್ ಶ್ರೀನಿವಾಸ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ: ಛಲವಾದಿ ಗುರುಪೀಠದಲ್ಲಿ ಹೆಚ್. ಹನುಮಂತಪ್ಪನವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಚಿತ್ರದುರ್ಗ: ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ಶ್ರೀರಾಮಸೇನೆ ಕೃತ್ಯ ಖಂಡಿಸಿ ಚಿತ್ರದುರ್ಗದಲ್ಲಿ ಛಲವಾದಿ ಗುರುಪೀಠದಿಂದ ಪ್ರತಿಭಟನೆ

ವಂದೇ ಮಾತರಂ’ ಗೀತೆಗೆ ಅಗೌರವ ಆರೋಪ: ಸೋನಿಯಾ ಗಾಂಧಿ ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬಿಜೆಪಿ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಉದ್ಯೋಗಾವಕಾಶ ಕಾರ್ಯಕ್ರಮ

ಮೊಳಕಾಲ್ಮೂರು ಆಂಧ್ರಕ್ಕೆ ಸೇರಿಸುವ ವಿವಾದಾತ್ಮಕ ಹೇಳಿಕೆ: ಶಾಸಕ ಎನ್.ವೈ. ಗೋಪಾಲಕೃಷ್ಣ ಕ್ಷಮೆಯಾಚನೆಗೆ ವಾರದ ಗಡುವು