Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು ಆಂಧ್ರಕ್ಕೆ ಸೇರಿಸುವ ವಿವಾದಾತ್ಮಕ ಹೇಳಿಕೆ: ಶಾಸಕ ಎನ್.ವೈ. ಗೋಪಾಲಕೃಷ್ಣ ಕ್ಷಮೆಯಾಚನೆಗೆ ವಾರದ ಗಡುವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ. 17 : ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್. ವೈ. ಗೋಪಾಲಕೃಷ್ಣ ಅವರು ಮೊಳಕಾಲ್ಮೂರನ್ನು ಆಂಧ್ರಪ್ರದೇಶಕ್ಕೆ ಸೇರಿಸಬೇಕೆಂಬ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ, ಚಿತ್ರದುರ್ಗದ ಬಂಜಾರ ಲಂಬಾಣಿ ಸಮಾಜ ಹಾಗೂ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ವತಿಯಿಂದ ತೀವ್ರ ವಿರೋಧ ವ್ಯಕ್ತಪಡಿಸಿ ಈ ಸಂಬಂಧ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಂಜಾರ ಸಮಾಜದ ಜಿಲ್ಲಾಧ್ಯಕ್ಷರಾದ ಎಂ.ಸತೀಶ್ ಕುಮಾರ್, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವನ್ನು ನೆರೆಯ ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂಬ ಶಾಸಕ ಗೋಪಾಲಕೃಷ್ಣ ಅವರ ಹೇಳಿಕೆಯು ನಾಡು, ನುಡಿ ಹಾಗೂ ಜನತೆಗೆ ಬಗೆದ ದ್ರೋಹವಾಗಿದೆ ಐದಾರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕನ್ನಡ ನಾಡು ಮತ್ತು ಭಾಷೆಯ ಕುರಿತು ಈ ರೀತಿಯ ಅವಮಾನಕಾರಿ ಹೇಳಿಕೆ ನೀಡಿರುವುದು ಸ್ಥಳೀಯ ಜನರಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ ಎಂದು ಶಾಸಕರ ವಿರುದ್ಧ ವಾಗ್ದಾಳಿ ನಡೆಸಿ ಕೂಡಲೇ ರಾಜೀನಾಮೆಗೆ ಒತ್ತಾಯ: ಕನ್ನಡ ನೆಲ, ಜಲ ಹಾಗೂ ಭಾಷೆಯ ಮೇಲೆ ಗೌರವವಿಲ್ಲದ ಶಾಸಕರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳು ತಕ್ಷಣವೇ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಲಾಯಿತು.

ಶಾಸಕರು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡದಿದ್ದರೆ, ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಅಲ್ಲದೆ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಸಭಾಧ್ಯಕ್ಷರು ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಶಾಸಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ರೀತಿಯ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಗಡಿಭಾಗದ ಶಾಸಕರು ಭವಿಷ್ಯದಲ್ಲಿ ಇಂತಹ ನಾಡು-ನುಡಿ ವಿರೋಧಿ ಹೇಳಿಕೆಗಳನ್ನು ನೀಡದಂತೆ ಕೆಪಿಸಿಸಿ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಶಾಸಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಮೊಳಕಾಲ್ಮೂರು ಕ್ಷೇತ್ರದ ಶಾಸಕರು ನಾಡಿನ ಹಿತಕ್ಕೆ ವಿರುದ್ಧವಾಗಿ ನೀಡಿರುವ ಹೇಳಿಕೆಯನ್ನು ಹಿಂಪಡೆದು ರಾಜೀನಾಮೆ ನೀಡಬೇಕು, ಇಲ್ಲವಾದಲ್ಲಿ ಸರ್ಕಾರ ಅವರ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಮತ್ತು ಅನರ್ಹತೆಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯ ಅಧ್ಯಕ್ಷ ಗಿರೀಶ್ ಡಿ.ಆರ್. ಅವರು ಎನ್.ವೈ. ಗೋಪಾಲಕೃಷ್ಣ ಅವರು ಆರು-ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವಿ ರಾಜಕಾರಣಿಯಾಗಿದ್ದರೂ, ಕರ್ನಾಟಕದ ನಾಡು, ನುಡಿ ಮತ್ತು ಸಂಸ್ಕೃತಿಗೆ ಅಪಮಾನ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವುದು ಖಂಡನೀಯ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಕೊರತೆಯಿದ್ದು, ತೊಗರಿ ಬೆಳೆದ ರೈತರು ಕಂಗಾಲಾಗಿದ್ದಾರೆ. ಗಡಿಭಾಗದ ಹಳ್ಳಿಗಳಲ್ಲಿ ಶಾಲೆ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಶಾಸಕರು ಇಂತಹ ಸಮಸ್ಯೆಗಳಿಗೆ ಗಮನಹರಿಸಿ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಕ್ಷೇತ್ರವನ್ನು ಬೇರೆ ರಾಜ್ಯಕ್ಕೆ ಸೇರಿಸುವ ಕುರಿತು ನೀಡಿರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಶಾಸಕರು ತಕ್ಷಣವೇ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದನ್ನು ಬಿಟ್ಟು ಬೇಷರತ್ ಕ್ಷಮೆಯಾಚಿಸಬೇಕು. ಒಂದು ವಾರದೊಳಗೆ ಕ್ಷಮೆಯಾಚಿಸದಿದ್ದರೆ, ಬಂಜಾರ ಸಮಾಜ, ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದೊಂದಿಗೆ ಸೇರಿ “ಮೊಳಕಾಲ್ಮೂರು ಚಲೋ” ಕಾರ್ಯಕ್ರಮ ಹಮ್ಮಿಕೊಂಡು ಕ್ಷೇತ್ರಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಮುದಾಯ ಮುಖಂಡರುಗಳಾದ ಮಂಜುನಾಯ್ಕ್, ಚೇತನ್ ನಾಯ್ಕ್, ಹಾಲೇಶ್, ರವಿನಾಯ್ಕ್, ಯಶವಂತ, ಪರಮೇಶ್ ನಾಯ್ಕ್, ಶಿವನಾಯ್ಕ್, ರಮೇಶ್ ನಾಯ್ಕ್ ಉಪಸ್ಥಿತರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ: ಛಲವಾದಿ ಗುರುಪೀಠದಲ್ಲಿ ಹೆಚ್. ಹನುಮಂತಪ್ಪನವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಚಿತ್ರದುರ್ಗ: ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ಶ್ರೀರಾಮಸೇನೆ ಕೃತ್ಯ ಖಂಡಿಸಿ ಚಿತ್ರದುರ್ಗದಲ್ಲಿ ಛಲವಾದಿ ಗುರುಪೀಠದಿಂದ ಪ್ರತಿಭಟನೆ

ವಂದೇ ಮಾತರಂ’ ಗೀತೆಗೆ ಅಗೌರವ ಆರೋಪ: ಸೋನಿಯಾ ಗಾಂಧಿ ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬಿಜೆಪಿ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಉದ್ಯೋಗಾವಕಾಶ ಕಾರ್ಯಕ್ರಮ

ಯುಜಿಸಿ-ನೆಟ್ ಪರೀಕ್ಷಾ ಅವಾಂತರ : ಎನ್‌ಟಿಎ ರದ್ದುಗೊಳಿಸಲು ಎಐಡಿಎಸ್ಓ ಆಗ್ರಹ!