ದಾವಣಗೆರೆ; ಆ 19 : 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬೆವಿಕಂ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿಜಲಿಂಗಪ್ಪ ಲೇಔಟ್, ದೇವರಾಜ್ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ, ಶಾಂತಿ ನಗರ, ವಿನೋಬ ನಗರ 4ನೇ ಮೇನ್ರಸ್ತೆಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
66/11 ಕೆ.ವಿ. ಕುಕ್ಕವಾಡ ಮತ್ತು 66/11 ಕೆ.ವಿ. ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.










