ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಬೇಡಿದ್ದನ್ನು ಕರುಣಿಸುವ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ನಗರದ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನನ್ನು ಸುಗಂಧರಾಜ, ಸೇವಂತಿಗೆ, ಮಲ್ಲಿಗೆ, ಕನಕಾಂಬರ, ಹಸಿರು ಪತ್ರೆ ಹಾಗೂ ಬೆಳ್ಳಿ ಬಂಗಾರದ ಒಡವೆಗಳಿಂದ ಸಿಂಗರಿಸಿ ಪೂಜಿಸಲಾಯಿತು.
ಕೆಳಗೋಟೆಯಲ್ಲಿರುವ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿಯನ್ನು ಕಿರೀಟ, ಗದೆ, ಬೆಳ್ಳಿ ಬಂಗಾರದ ಆಭರಣ ಹಾಗೂ ಬಣ್ಣ ಬಣ್ಣದ ಹೂವು, ಹಾರಗಳಿಂದ ಅಲಂಕರಿಸಿ ಪೂಜಿಸಲಾಯಿತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಕಣಿವೆಮಾರಮ್ಮ ಹಾಗೂ ವರಮಹಾಲಕ್ಷ್ಮಿಯನ್ನು ಪೂಜಿಸಿ ಭಕ್ತಿ ಸಮರ್ಪಿಸಿದರು.
ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.








