Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡರೂ ಮನೆಮನೆ ಸಮೀಕ್ಷೆ ಸ್ಟಿಕರ್, ಎನ್ಯೂಮರೇಷನ್ ಫಾರಂ ವಿತರಿಸದೆ ನಿರ್ಲಕ್ಷ್ಯ

---Advertisement---

ವಿಶೇಷ ವರದಿ :
ಸಿದ್ದೇಶ್. ಜಿ. ವೆಂಕಟಾಪುರ
ವರದಿಗಾರರು, ಮೊಳಕಾಲ್ಮೂರು
ಮೊ : 97409 64139 Monikareddyl2401@gmail.com

ಸುದ್ದಿಒನ್, ಮೊಳಕಾಲ್ಮೂರು, ಆಗಸ್ಟ್. 24 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡು ವಾರ ಕಳೆದರೂ ವೆಂಕಟಾಪುರ ಗ್ರಾಮದಲ್ಲಿ ಮನೆಮನೆಗೆ ತೆರಳಿ ಎನ್ಯೂಮರೇಷನ್ ಫಾರಂ ಹಾಗೂ ಮನೆಮನೆ ಸಮೀಕ್ಷೆ ನಡೆಸಿರುವುದನ್ನು ಸೂಚಿಸುವ ಸ್ಟಿಕರ್ ಅಳವಡಿಸುವ ಕಾರ್ಯ ಪೂರ್ಣಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ತಾಲ್ಲೂಕಿನ ವೆಂಕಟಾಪುರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆ ಸಮೀಕ್ಷೆ ನಡೆಸಿ ಅಗತ್ಯ ದಾಖಲೆ ಹಾಗೂ ಫಾರಂಗಳನ್ನು ವಿತರಿಸಬೇಕಾಗಿದ್ದರೂ, ಹಲವು ಮನೆಗಳಿಗೆ ಇದುವರೆಗೆ ಎನ್ಯೂಮರೇಷನ್ ಫಾರಂ ತಲುಪಿಲ್ಲ. ಅಲ್ಲದೆ, ಮನೆಮನೆ ಸಮೀಕ್ಷೆ ನಡೆಸಿರುವುದನ್ನು ಸೂಚಿಸುವ ಸ್ಟಿಕರ್‌ಗಳನ್ನೂ ಅಳವಡಿಸದಿರುವುದು ಸಾರ್ವಜನಿಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಎಸ್‌ಐಆರ್ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಪ್ರತಿಯೊಂದು ಮನೆಗೂ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುವುದು, ಅಗತ್ಯ ದಾಖಲೆಗಳನ್ನು ಸಂಗ್ರಹಿಸುವುದು ಹಾಗೂ ಸಮೀಕ್ಷೆಯ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ದಾಖಲಿಸುವುದು BLOಗಳ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ, ಪ್ರಕ್ರಿಯೆ ಪೂರ್ಣಗೊಂಡು ಒಂದು ವಾರ ಕಳೆದಿದ್ದರೂ ಅಧಿಕಾರಿಗಳಿಂದ ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ನಡೆಯುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನೆಗಳಿಗೆ ಫಾರಂ ತಲುಪದಿರುವುದರಿಂದ ಅರ್ಹ ಮತದಾರರ ಹೆಸರು, ವಿಳಾಸ ಹಾಗೂ ಕುಟುಂಬದ ಸದಸ್ಯರ ವಿವರಗಳ ಕುರಿತು ಮುಂದಿನ ಹಂತದ ಪ್ರಕ್ರಿಯೆಯಲ್ಲಿ ಸಮಸ್ಯೆಯಾಗುವ ಆತಂಕ ಗ್ರಾಮಸ್ಥರಲ್ಲಿ ಮೂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವೆಂಕಟಾಪುರ ಗ್ರಾಮದಲ್ಲಿ ನಡೆದಿರುವ ಎಸ್‌ಐಆರ್ ಪ್ರಕ್ರಿಯೆಯ ಪರಿಶೀಲನೆ ನಡೆಸಿ, ಬಾಕಿ ಉಳಿದಿರುವ ಮನೆಗಳಿಗೆ ಎನ್ಯೂಮರೇಷನ್ ಫಾರಂ ವಿತರಿಸುವುದರ ಜೊತೆಗೆ ಸಮೀಕ್ಷೆ ಸ್ಟಿಕರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೇಲಧಿಕಾರಿಗಳ ಗಮನಕ್ಕೆ: ವೆಂಕಟಾಪುರದಲ್ಲಿ ಎಸ್‌ಐಆರ್ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿ, BLOಗಳು ಮನೆಮನೆಗೆ ಭೇಟಿ ನೀಡಿರುವ ಕುರಿತು ಸೂಕ್ತ ದಾಖಲೆ ಪರಿಶೀಲಿಸಬೇಕು. ಯಾವುದೇ ಅರ್ಹ ಮತದಾರರು ಪ್ರಕ್ರಿಯೆಯಿಂದ ಹೊರಗುಳಿಯದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now