ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 24 : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ತುಮಕೂರು ವಲಯದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮತ್ತು ತುಮಕೂರು ವಲಯ ಸಮಿತಿಯ ಪ್ರತಿನಿಧಿಯಾಗಿ ಭದ್ರಾ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎಚ್.ರಾಜು ಅವರನ್ನು ನೇಮಕ ಮಾಡಲಾಗಿದೆ.
KSCA ತುಮಕೂರು ವಲಯದ ಕನ್ವೀನರ್ ಹಾಗೂ ಮ್ಯಾನೇಜಿಂಗ್ ಕಮಿಟಿ ಸದಸ್ಯ ಸಿ.ಆರ್.ಹರೀಶ್ ಅವರು ದಿನಾಂಕ 24-08-2026 ರಂದು ಈ ಕುರಿತು ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳ ಸುಗಮ ನಿರ್ವಹಣೆ ಮತ್ತು ಪರಿಣಾಮಕಾರಿ ಸಮನ್ವಯದ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭದ್ರಾ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಎಚ್.ರಾಜು ಅವರು KSCA, ತುಮಕೂರು ವಲಯ ಮತ್ತು ಎಲ್ಲಾ ಸಂಬಂಧಪಟ್ಟ ಕ್ರೀಡಾ ಮಧ್ಯಸ್ಥಗಾರರೊಂದಿಗೆ ಸಮನ್ವಯ ಸಾಧಿಸಿ ಜಿಲ್ಲೆಯಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ. ತುಮಕೂರು ವಲಯ ಸಮಿತಿಯ ಸಭೆ ಮತ್ತು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂಪೂರ್ಣ ಸಹಕಾರ ನೀಡುವಂತೆ ಸೂಚಿಸಲಾಗಿದೆ.









