ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಜಿಲ್ಲಾ ಕಾಂಗ್ರೆಸ್ ಸಮಿತಿಗೆ ವಕ್ತಾರರನ್ನಾಗಿ ಹಿರಿಯೂರಿನ ಶ್ರೀಮತಿ ಮಾನಸ ಅವರನ್ನು ನೇಮಕ ಮಾಡಲಾಗಿದೆ.
ಇದೇ ಮೊದಲ ಭಾರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಮಹಿಳೆಯೊಬ್ಬರಿಗೆ ವಕ್ತಾರರನ್ನಾಗಿ ಉನ್ನತ ಹುದ್ದೆ ನೀಡಲಾಗಿದ್ದು . ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾ ಅಧ್ಯಕ್ಷ ಎಂ ಕೆ ತಾಜ್ ಪೀರ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನಸ, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ನಾಯಕರು ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ. ಕಾಂಗ್ರೆಸ್ ತತ್ವ ಸಿದ್ಧಾಂತ ಅನುಸಾರವಾಗಿ ಕೆಲಸ ಮಾಡುವುದಾಗಿ ಹೇಳಿದರು. ನಮ್ಮ ಕುಟುಂಬ ನಾಲ್ಕು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಮಾಡಿದೆ. ನಾನು ಸಹ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿದ್ದು, ಇದನ್ನು ಪರಿಗಣಿಸಿ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ನುಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸ ಇದ್ದು, ಸಾಮಾಜಿಕ ನ್ಯಾಯ ನಮ್ಮ ಮೂಲ ತತ್ವ. ಇದನ್ನು ಪರಿಪಾಲನೆ ಮಾಡಿಕೊಂಡು ಪಕ್ಷದ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್ ಶಿವಣ್ಣ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ ಬಾಬು,ಜಿ ಪಂ ಮಾಜಿ ಸದಸ್ಯ ಚಂದ್ರಪ್ಪ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಡಿ ಎನ್ ಮೈಲಾರಪ್ಪ,ಮುಖಂಡರುಗಳಾದ ಜಾನ್ಹವಿ ನಾಗರಾಜ್ ಮರುಳಾರಾಧ್ಯ,ಮಂಜುನಾಥ್, ಹಿರಿಯೂರು ನಗರ ಸಭೆ ಮಾಜಿ ಉಪಾಧ್ಯಕ್ಷೆ ಅಂಬಿಕಾ, ವಾಣಿ, ಚಿದಾನಂದ್ ಮೂರ್ತಿ, ರಾಮಚಂದ್ರಪ್ಪ, ಇತರರು ಹಾಜರಿದ್ದರು.









