Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರಾವಣ ಮಾಸ: ಚಿತ್ರದುರ್ಗದ ತುಳಜಾ ಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಭಕ್ತರಿಗೆ ಅನ್ನದಾಸೋಹ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಸೆ. 01 : ನಗರದ ಹೂರ ವಲಯದಲ್ಲಿನ ಲಕ್ಷ್ಮಿ ಸಾಗರ ಗೇಟ್ ಬಳಿಯಲ್ಲಿನ ಶ್ರೀ ತುಳಜಾ ಭವಾನಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಮೂರನೇ ಸೋಮವಾರದ ಅಂಗವಾಗಿ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ “ಶ್ರಾವಣ ಮಾಸದ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ತುಳಜಾ ಭವಾನಿ ಅಮ್ಮನವರಿಗೆ ವಿಶೇಷವಾದ ಪೂಜೆಯನ್ನು ನಡೆಸಲಾಯಿತು, ಈ ಸಮಯದಲ್ಲಿ ಅಮ್ಮನವರಿಗೆ ವಿವಿಧ ರೀತಿಯ ಹೂಗಳಿಂದ ಆಲಂಕಾರವನ್ನು ಮಾಡಲಾಗಿತ್ತು. ಮಧ್ಯಾಹ್ನ ಪ್ರಸಾದ ವಿನಿಯೋಗ ಮಾಡಲಾಯಿತು. ಇದರಲ್ಲಿ ಸುಮಾರು 800 ರಿಂದ 1000 ಜನ ಭಕ್ತಾಧಿಗಳು ಅನ್ನ ದಾಸೋಹದಲ್ಲಿ ಭಾಗವಹಿಸಿದ್ದರು. ತುಳಜಾ ಭವಾನಿ ದೇವಸ್ಥಾನ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಭಕ್ತಾದಿಗಳು ಮತ್ತು ಭಾವಸಾರ ಕ್ಷತ್ರಿಯದ ಸಮಾಜದ ಎಲ್ಲಾ ಬಾಂಧವರು ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಶ್ರೀ ತುಳಜಾ ಭವಾನಿ ದೇವಸ್ಥಾನ ಸೇವಾ ಟ್ರಸ್ಟ್ ಎಂ.ಇ. ಸಂತೋಷ ಬಾಬು, ದಾಸ್ಯ ನಾಯ್ಕ್, ನಾಗರಾಜ್ ಜೆ, ಬಸವರಾಜು, ಮಂಜುನಾಥ್, ಮಾಯಣ್ಣ, ಅಜ್ಜಯ್ಯ, ಪೂಜಾರ್ ಗಂಗಣ್ಣ, ಧನುಕುಮಾರ್, ಕೋಟ್ರೇಶ್ ದರ್ಶನ, ಪೂಜಾ ಸಂತೋಷ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now