Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ‘ಪ್ರಜಾಸೇವಾ ಆಂದೋಲನ’: ಸ್ಥಳದಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ

---Advertisement---

ಸುದ್ದಿಒನ್, ಚಿತ್ರದುರ್ಗ,ಸೆ.04 : ರಾಜ್ಯ ಸರ್ಕಾರದ ಬಹುಮುಖ್ಯ ಯೋಜನೆಯಾದ ‘ಪ್ರಜಾಸೇವಾ ಆಂದೋಲನ’ ಇದೇ ಸೆಪ್ಟೆಂಬರ್ 5ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಉಸ್ತುವಾರಿ ಜಿಲ್ಲಾಧಿಕಾರಿ ಡಾ. ಎಸ್. ಆಕಾಶ್ ತಿಳಿಸಿದ್ದಾರೆ.
ಸಾರ್ವಜನಿಕರ ಮನವಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ನಿಯಮಾನುಸಾರ ಸ್ಥಳದಲ್ಲೇ ಪರಿಹಾರ ನೀಡುವ ಉದ್ದೇಶದಿಂದ ಈ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ.

ಸೆ.05ರಂದು 11 ಗಂಟೆಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಹಿರಿಯೂರು ಕಸಬಾ ಹೋಬಳಿಯ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಟಿ. ರಘುಮೂರ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಉಳಿದಂತೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಬಸವೇಶ್ವರ ಸಮುದಾಯ ಭವನ, ಚಳ್ಳಕೆರೆ ತಾಲೂಕು ಕಚೇರಿ ಆವರಣ, ಹೊಸದುರ್ಗದ ಅಶೋಕರಂಗ ಮಂದಿರ, ಹೊಳಲ್ಕೆರೆ ತಾಲೂಕಿನ ರಾಮಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣ ಹಾಗೂ ಮೊಳಕಾಲ್ಮೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಜನಸ್ಪಂದನ ನಡೆಯಲಿದೆ.

ಆಯಾ ತಾಲೂಕು ಮಟ್ಟದ ಕಾರ್ಯಕ್ರಮಗಳಲ್ಲಿ ಸ್ಥಳೀಯ ಶಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕಾಗಿ ಉಸ್ತುವಾರಿ ಜಿಲ್ಲಾಧಿಕಾರಿ ಡಾ.ಎಸ್.ಆಕಾಶ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now