Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಚೈನ್ ಸ್ನ್ಯಾಚಿಂಗ್ ತಡೆಗೆ ನಗರ ಪೊಲೀಸರ ಹೈ ಅಲರ್ಟ್ : ಸಾರ್ವಜನಿಕರು ಈ ಮುನ್ನೆಚ್ಚರಿಕೆ ಪಾಲಿಸಿ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ನಗರದಲ್ಲಿ ಸಾರ್ವಜನಿಕರ, ವಿಶೇಷವಾಗಿ ಮಹಿಳೆಯರ ಚಿನ್ನದ ಸರ ಕಳವು (ಚೈನ್ ಸ್ನ್ಯಾಚಿಂಗ್) ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಿತ್ರದುರ್ಗ ನಗರ ಪೊಲೀಸ್ ಠಾಣೆ ವತಿಯಿಂದ ವ್ಯಾಪಕ ಮುನ್ನೆಚ್ಚರಿಕೆ ಹಾಗೂ ಜಾಗೃತಿ ಪ್ರಕಟಣೆ ಹೊರಡಿಸಲಾಗಿದೆ.

ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಅಪರಾಧ ನಿಯಂತ್ರಣಕ್ಕೆ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ಪ್ರಮುಖ ಮುನ್ನೆಚ್ಚರಿಕೆಗಳು : 

* ನಿರ್ಜನ ಪ್ರದೇಶಗಳಲ್ಲಿ ಅಥವಾ ರಾತ್ರಿ ವೇಳೆ ಓಡಾಡುವಾಗ ಹೆಚ್ಚು ಎಚ್ಚರದಿಂದಿರಿ.
* ದೇವಸ್ಥಾನ, ಮಾರುಕಟ್ಟೆ ಹಾಗೂ ಸಾರ್ವಜನಿಕ ಸಮಾರಂಭಗಳಿಗೆ ಹೋಗುವಾಗ ಅತಿಯಾದ ಚಿನ್ನದ ಆಭರಣಗಳನ್ನು ಧರಿಸುವುದನ್ನು ಕಡಿಮೆ ಮಾಡಿ ಅಥವಾ ಬಟ್ಟೆಯಿಂದ ಮುಚ್ಚಿಕೊಳ್ಳಿ.
* ಅನುಮಾನಾಸ್ಪದವಾಗಿ ಬೈಕ್ನಲ್ಲಿ ಓಡಾಡುವ ಅಥವಾ ಹೆಲ್ಮೆಟ್ ಧರಿಸಿ ನಿರಂತರವಾಗಿ ಹಿಂಬಾಲಿಸುವ ವ್ಯಕ್ತಿಗಳ ಬಗ್ಗೆ ಎಚ್ಚರವಿರಲಿ.
* ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಹಿಳೆಯರು ಆಭರಣಗಳು ಸ್ಪಷ್ಟವಾಗಿ ಕಾಣದಂತೆ ಮುನ್ನೆಚ್ಚರಿಕೆ ವಹಿಸಿ.

ಅಪರಾಧ ನಡೆದರೆ ತಕ್ಷಣ ಏನು ಮಾಡಬೇಕು?

ಗಾಬರಿಗೊಳ್ಳದೆ ಹತ್ತಿರದ ಪೊಲೀಸ್ ಸಿಬ್ಬಂದಿಗೆ ಅಥವಾ ಚಿತ್ರದುರ್ಗ ನಗರ ಪೊಲೀಸ್ ಠಾಣೆಗೆ ಕೂಡಲೇ ಮಾಹಿತಿ ನೀಡಿ. ಕಳುವಾದ ಸರದ ತೂಕ, ವಾಹನದ ನಂಬರ್, ಬಣ್ಣ ಹಾಗೂ ಮುಖಚಹರೆಯ ಬಗ್ಗೆ ನಿಖರವಾದ ಮಾಹಿತಿ ನೀಡಿ.
ತುರ್ತು ಸಂದರ್ಭದಲ್ಲಿ ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ. ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಅಪರಿಚಿತರ ಬಗ್ಗೆ ಎಚ್ಚರವಿರಲಿ, ಪೊಲೀಸರೊಂದಿಗೆ ಸಹಕರಿಸಿ ಸುರಕ್ಷಿತವಾಗಿರಿ ಎಂದು ನಗರ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now