Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಾಜದ ಸದೃಡತೆಗೆ ಮಹಿಳೆಯರ ಪಾತ್ರ ಮುಖ್ಯ : ಬಸವ ಪ್ರಭು ಸ್ವಾಮೀಜಿ

Facebook
Twitter
Telegram
WhatsApp

ಬೆಂಗಳೂರು, (ಮಾ.07) : ಸಮಾಜದ ಸದೃಢತೆಗೆ ಮಹಿಳೆಯರ ಪಾತ್ರ ಮುಖ್ಯ ಎಂದು ಬಸವ ಪ್ರಭು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.

ವಿಜಯನಗರದ ಬಸವ ಕೇಂದ್ರದ ವತಿಯಿಂದ ಆಯೋಜಿಸಿದ್ದ ಶರಣ ಸಂಗಮ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ತಮ್ಮ ಬದುಕಿನಲ್ಲಿ ಎಲ್ಲವೂ ಇದೆ ಆದರೆ ನೆಮ್ಮದಿ ಇಲ್ಲ. ಅದನ್ನು ಪಡೆಯಬೇಕಾದರೆ ಶರಣ ಸಂಗಮದಂತಹ ಕಾರ್ಯಕ್ರಮಗಳಿಗೆ ಬರುವುದರಿಂದ ನಿಮ್ಮಲ್ಲಿ ನೆಮ್ಮದಿ ನೆಲೆಸುತ್ತದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಬಸವ ಕೇಂದ್ರದ ಅಧ್ಯಕ್ಷರಾದ ಅರುಣ್ ಕುಮಾರ್ ಡಿ ಟಿ ಮಾತನಾಡಿ ಮುರುಘಾ ಮಠದ ಶಾಖೆಗಳಲ್ಲಿ ಶರಣ ಸಂಗಮ ಕಾರ್ಯಕ್ರಮಗಳ ಮೂಲಕ ಬಸವಾದಿ ಶರಣರ ತತ್ವ ಆಚರಣೆಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಬಸವ ಕೇಂದ್ರಗಳು ಮಾಡುತ್ತಿವೆ ಎಂದರು.

ಮುಖ್ಯ ಅಥಿತಿಗಳಾಗಿ ಶೈಲಜಾ ವಿ ಸೋಮಣ್ಣ ನವರು ಮಾತನಾಡಿ ಸ್ತ್ರೀಯರು ಇಂದಿನ ದಿನಗಳಲ್ಲಿ ತಾಳ್ಮೆಯಿಂದ ಇರಬೇಕು ಹಾಗೂ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡುವಂತೆ ತಿಳಿಸಿದರು.

ಇಂದುಮತಿ ಸಾಲಿಮಠ ರವರು ಈ ನಾಡಿನಲ್ಲಿ ಮಹಿಳೆಯರು ಧೃತಿಗೆಡದೆ ಯಶಸ್ವಿ ಜೀವನ ನಡೆಸುವುದು ಮುಖ್ಯ, ಅದಕ್ಕೆ ನನ್ನ ಜೀವನವೇ ಉದಹರಣೆ ಎಂದರು.

ಪೊಲೀಸ್ ಅಧಿಕಾರಿ ಸ್ವಾತಿ ಮಾತನಾಡಿ ಇನ್ನೂ ಕೆಲವು ಕಡೆ ಮಹಿಳೆಯರ ಮೇಲೆ ಧೌರ್ಜನ್ಯ ನಡೆಯುತ್ತಿದೆ ಅದು ಸಂಪೂರ್ಣವಾಗಿ ನಿಲ್ಲಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ವಿದ್ಯಾ ನಾಯ್ಡು, ಮಧುರಾ, ಅಪ್ಪುಗೆರೆ ತಿಮ್ಮರಾಜು ಉಪಸ್ಥಿತರಿದ್ದರು.

ಮಹಿಳಾ ಸಬಲೀಕರಣ ಅದರ ಕಲ್ಪನೆ ವಿಷಯವಾಗಿ ಉಪನ್ಯಾಸವನ್ನು ಶೇಷಾದ್ರಿಪುರಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ ನಡೆಸಿಕೊಟ್ಟರು.

ಶರಣೆ ಚಂದ್ರಮತಿ ವಚನಗಾಯನ ಮಾಡಿದರು, ಕು.ಅಮೃತ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!